Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:5 - ಪರಿಶುದ್ದ ಬೈಬಲ್‌

5 ನಿನ್ನ ಬಾಣಗಳು ತೀಕ್ಷ್ಣವಾಗಿವೆ. ಅವು ನಿನ್ನ ಶತ್ರುಗಳ ಎದೆಗೆ ನಾಟಿಕೊಳ್ಳುತ್ತವೆ; ಶತ್ರುಗಳು ನಿನ್ನ ಕಣ್ಣೆದುರಿನಲ್ಲೇ ನೆಲಕ್ಕುರುಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನಂಬು ಬಾಣಗಳು ಹರಿತವಾದುವು I ರಾಜದ್ರೋಹಿಗಳನು ಅವು ಇರಿಯುವುವು I ಜನಾಂಗಗಳು ನಿನ್ನ ಪಾದಕ್ಕೆರಗುವುವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜವಿರೋಧಿಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಹದವಾದ ಬಾಣಗಳು ರಾಜದ್ರೋಹಿಗಳನ್ನು ಇರಿಯಲಿ. ಜನಾಂಗಗಳು ನಿಮ್ಮ ಪಾದಕ್ಕೆ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:5
18 ತಿಳಿವುಗಳ ಹೋಲಿಕೆ  

ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ ಅವರು ಬೆನ್ನುಕೊಟ್ಟು ಓಡಿಹೋಗುವರು.


ನಿನ್ನಿಂದ ನನಗೆ ನೋವಾಗಿದೆ. ನಿನ್ನ ಬಾಣಗಳು ನನಗೆ ನಾಟಿಕೊಂಡಿವೆ.


“ದೇವರು ಆ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಂತೆ ಬಲಿಷ್ಠರಾಗಿದ್ದಾರೆ. ಅವರು ತಮ್ಮೆಲ್ಲಾ ಶತ್ರುಗಳನ್ನು ಸೋಲಿಸುವರು. ಅವರು ತಮ್ಮ ವೈರಿಗಳ ಮೂಳೆಗಳನ್ನು ಮುರಿದುಹಾಕುವರು. ಅವರ ಬಾಣಗಳು ಅವರ ವೈರಿಗಳನ್ನು ಕೊಲ್ಲುವವು.


ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.


ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.


ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು.


ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು.


ಯೆಹೂದ್ಯನಾಯಕರು ಈ ಮಾತುಗಳನ್ನು ಕೇಳಿ ಬಹು ಕೋಪಗೊಂಡು, ಅಪೊಸ್ತಲರನ್ನು ಕೊಲ್ಲಬೇಕೆಂದಿದ್ದರು.


ಮತ್ತು ಹೆಚ್ಚುಹೆಚ್ಚು ಜನರು ಪ್ರಭುವನ್ನು ನಂಬಿಕೊಂಡರು. ಅನೇಕ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳ ಸಮುದಾಯಕ್ಕೆ ಸೇರುತ್ತಿದ್ದರು.


ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.


ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು