Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:4 - ಪರಿಶುದ್ದ ಬೈಬಲ್‌

4 ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ಯಾಕೋಬವಂಶದವರಾದ ನಮ್ಮನ್ನು ಪ್ರೀತಿಸಿ ನಾವು ಅಭಿಮಾನಿಸುವ ಸ್ವಾಸ್ತ್ಯವನ್ನು ನಿರ್ಣಯಿಸಿಕೊಟ್ಟಿದ್ದಾನೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:4
19 ತಿಳಿವುಗಳ ಹೋಲಿಕೆ  

ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.


ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು.


ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”


ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.


ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ಯೆಹೋವನು, “ನಾನು ನಿಮ್ನನ್ನೆಲ್ಲಾ ಪ್ರೀತಿಸುತ್ತೇನೆ” ಎಂದು ಹೇಳುತ್ತಾನೆ. ಆದರೆ ನೀವು, “ನೀನು ಪ್ರೀತಿಸುವದಕ್ಕೆ ಗುರುತು ಏನು?” ಎಂದು ಕೇಳುತ್ತೀರಿ. ಯೆಹೋವನು ಅದಕ್ಕುತ್ತರವಾಗಿ, “ಏಸಾವನು ಯಾಕೊಬನ ಅಣ್ಣನಲ್ಲವೋ? ಆದರೆ ನಾನು ಯಾಕೋಬನನ್ನು ಆರಿಸಿಕೊಂಡೆನು.


ಅವರನ್ನು ಈಜಿಪ್ಟಿನಿಂದ ಹೊರಗೆ ತಂದು, ನಾನು ಅವರಿಗಾಗಿ ಹುಡುಕಿಟ್ಟಿರುವ ದೇಶಕ್ಕೆ ಕರೆದುಕೊಂಡು ಹೋಗುವುದಾಗಿ ವಾಗ್ದಾನ ಮಾಡಿದೆನು. ಅದು ಹಾಲೂ ಜೇನೂ ಹರಿಯುವ ದೇಶವಾಗಿತ್ತು. ಅದು ಎಲ್ಲಾ ದೇಶಗಳಿಗಿಂತಲೂ ಸುಂದರವಾದ ದೇಶ.


ಯೆಹೋವನಾದ ನಾನು ಹೀಗೆಂದುಕೊಂಡೆ: “ನಾನು ಸಂತೋಷದಿಂದ ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುವೆನು. ಬೇರೆ ಎಲ್ಲಾ ಜನಾಂಗಗಳ ಪ್ರದೇಶಕ್ಕಿಂತ ಅತಿ ಸುಂದರವಾದ ಪ್ರದೇಶವನ್ನು ನಿಮಗೆ ಕೊಡುವುದಕ್ಕೆ ನಾನು ಸಂತೋಷಪಡುವೆನು. ನೀವು ನನ್ನನ್ನು ‘ತಂದೆ’ ಎಂದು ಕರೆಯುವಿರೆಂದು ನಾನು ಭಾವಿಸಿದ್ದೆ. ನೀವು ಯಾವಾಗಲೂ ನನ್ನ ಹಿಂಬಾಲಕರಾಗಿರುವಿರೆಂದು ಭಾವಿಸಿದ್ದೆ.


“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.


ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.


ನಿಮ್ಮ ದೇವರಾದ ಯೆಹೋವನು ಆ ಭೂಮಿಯನ್ನು ಕಾಯುತ್ತಾನೆ. ಆ ದೇಶವನ್ನು ವರ್ಷದ ಪ್ರಾರಂಭದಿಂದ ಕೊನೆಯ ತನಕ ಪರಿಪಾಲಿಸುತ್ತಾನೆ.


ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈಗಳಲ್ಲಿರುವರು. ಆತನ ಕಾಲ ಬಳಿಯಲ್ಲಿ ಕುಳಿತುಕೊಂಡು ಬೋಧನೆಯನ್ನು ಕೇಳುವರು.


ಆತನು ಆ ದೇಶಗಳನ್ನು ಇಸ್ರೇಲರಿಗೆ ಉಡುಗೊರೆಯಾಗಿ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು