Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:10 - ಪರಿಶುದ್ದ ಬೈಬಲ್‌

10 ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರೇ, ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದವರು; ಆದದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವದರಿಂದ ಅವರನ್ನು ದೊಬ್ಬಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:10
41 ತಿಳಿವುಗಳ ಹೋಲಿಕೆ  

ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.


ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.


ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಸಂಪೂರ್ಣವಾಗಿ ನಾಶಮಾಡು! ನನಗೆ ಕೇಡುಮಾಡಬೇಕೆಂದಿರುವ ಅವರಿಗೆ ನಾಚಿಕೆಯೂ ಅವಮಾನವೂ ಆವರಿಸಿಕೊಳ್ಳಲಿ.


ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.


ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.


ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”


ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. ಅವಳ ಮಕ್ಕಳು ದೂರಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.


ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕೆಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.


ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


“ಆದರೆ ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ತಪ್ಪುಗಳನ್ನು ಮಾಡಿದ್ದೇವೆ. ನಾವು ನಿನಗೆ ವಿರೋಧವಾಗಿ ದಂಗೆ ಎದ್ದಿದ್ದೇವೆ. ನಾವು ನಿನ್ನ ಆಜ್ಞೆಗಳನ್ನು ಮತ್ತು ಸರಿಯಾದ ನಿರ್ಣಯಗಳನ್ನು ತೊರೆದಿದ್ದೇವೆ.


ನನ್ನ ಮಾತುಗಳನ್ನು ಕೇಳದೆ ಹೋದರೆ ನೀವು ನನಗೆ ವಿರೋಧಿಗಳಾಗಿದ್ದೀರಿ. ನಿಮ್ಮ ವೈರಿಯು ನಿಮ್ಮನ್ನು ನಾಶಮಾಡುವನು.” ಯೋಹೋವನೇ ಇವುಗಳನ್ನು ನುಡಿದಿದ್ದಾನೆ.


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಯಾಕೆಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು. ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು.


ಒಡೆಯನೇ, ನಮ್ಮ ಸುತ್ತಮುತ್ತಲಿನ ಜನರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಏಳರಷ್ಟು ದಂಡಿಸು. ನಿನಗೆ ಅವಮಾನಮಾಡಿದ್ದರಿಂದ ಅವರನ್ನು ದಂಡಿಸು.


ಆತನು ಪ್ರಪಂಚವನ್ನು ತನ್ನ ಮಹಾಶಕ್ತಿಯಿಂದ ಆಳುತ್ತಾನೆ. ಆತನು ಎಲ್ಲರನ್ನೂ ಗಮನಿಸುತ್ತಾನೆ. ಆತನ ವಿರುದ್ಧ ದಂಗೆಯೇಳಲು ಯಾರಿಗೂ ಆಗದು.


ಯೆಹೋವನೇ, ಎದ್ದೇಳು, ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.


ಕೆಡುಕರನ್ನು ನಾಶಮಾಡು. ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು!


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.


ನಿನ್ನನ್ನು ಕೊಲ್ಲಲು ಒಬ್ಬ ವ್ಯಕ್ತಿಯು ಅಟ್ಟಿಸಿಕೊಂಡು ಬಂದರೆ, ನಿನ್ನ ದೇವರಾದ ಯೆಹೋವನು ನಿನ್ನ ಜೀವವನ್ನು ರಕ್ಷಿಸುತ್ತಾನೆ! ಆದರೆ ಯೆಹೋವನು ನಿನ್ನ ಶತ್ರುಗಳನ್ನು ಕವಣೆಯ ಕಲ್ಲನ್ನು ಎಸೆಯುವಂತೆ ಎಸೆದುಬಿಡುತ್ತಾನೆ!


“ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು