Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:11 - ಪರಿಶುದ್ದ ಬೈಬಲ್‌

11 ದೇವರಲ್ಲಿ ಭರವಸವಿಟ್ಟಿರುವ ಜನರೆಲ್ಲರೂ ಸದಾಕಾಲ ಸಂತೋಷವಾಗಿರಲಿ. ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11-12 ದೊರಕುವುದು ದೇವಾ, ನಿನ್ನಾಶೀರ್ವಾದ ಸಜ್ಜನರಿಗೆ I ಕವಚವಾದಂತಿಹುದು ನಿನ್ನ ಕರುಣೆ ಅಂಥವರಿಗೆ II ಎಂದೇ ಹರ್ಷಾನಂದಗೊಳ್ವರು ನಿನ್ನನಾಶ್ರಯಿಸಿದವರೆಲ್ಲರು I ನೀ ರಕ್ಷಿಸೆ, ಉಲ್ಲಾಸಗೊಳ್ಳುವರು ನಿನ್ನ ನಾಮಪ್ರಿಯರೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ನಿಮ್ಮನ್ನು ಆಶ್ರಯಿಸುವವರೆಲ್ಲರು ಆನಂದಿಸಲಿ; ಅವರು ಸದಾ ನಿಮ್ಮ ಆನಂದ ಗಾನವನ್ನು ಹಾಡಲಿ. ನಿಮ್ಮ ಹೆಸರನ್ನು ಪ್ರೀತಿಸುವವರು ನಿಮ್ಮಲ್ಲಿ ಆನಂದಿಸುವಂತೆ ಅವರನ್ನು ನಿಮ್ಮ ಸಂರಕ್ಷಣೆಯಿಂದ ಆವರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:11
18 ತಿಳಿವುಗಳ ಹೋಲಿಕೆ  

ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಅವರು ಉಲ್ಲಾಸಿಸುತ್ತಾ ಸಂತೋಷವಾಗಿರಲಿ!


ಆದರೆ ನಿನ್ನ ದರ್ಶನವನ್ನು ಬೇಡುವವರು ಉಲ್ಲಾಸದಿಂದ ಸಂತೋಷಪಡಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು, “ಯೆಹೋವನಿಗೆ ಸ್ತೋತ್ರವಾಗಲಿ” ಎಂದು ಯಾವಾಗಲೂ ಹೇಳಲಿ.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


ಆತನ ಸೇವಕರ ಸಂತತಿಗಳವರು ಆ ದೇಶವನ್ನು ಪಡೆದುಕೊಳ್ಳುವರು. ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು.


ಹುಲ್ಲುಗಾವಲುಗಳು ಕುರಿಗಳಿಂದ ತುಂಬಿಹೋಗಿವೆ. ಕಣಿವೆಗಳು ಧಾನ್ಯದಿಂದ ತುಂಬಿತುಳುಕುತ್ತಿವೆ. ಎಲ್ಲರೂ ಹಾಡುತ್ತಾ ಆನಂದಘೋಷ ಮಾಡುತ್ತಿದ್ದಾರೆ.


ನನಗೆ ನ್ಯಾಯ ದೊರೆಯಲೆಂದು ಅಪೇಕ್ಷಿಸುವವರು ಸಂತೋಷಪಡಲಿ. “ಯೆಹೋವನು ಎಷ್ಟೋ ದೊಡ್ಡವನು! ಆತನು ತನ್ನ ಸೇವಕನಿಗೆ ಅತ್ಯುತ್ತಮವಾದುದನ್ನೇ ಮಾಡಿದನು” ಎಂದು ಅವರು ಹೇಳುತ್ತಲೇ ಇರಲಿ.


ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು.


ಅದು ಸಂಭವಿಸಿದಾಗ, ಮುಂಜಾನೆಯ ನಕ್ಷತ್ರಗಳು ಒಟ್ಟಾಗಿ ಹಾಡಿದವು; ದೇವದೂತರುಗಳು ಆನಂದಘೋಷ ಮಾಡಿದರು!


“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು