Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:4 - ಪರಿಶುದ್ದ ಬೈಬಲ್‌

4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ. ನಿನ್ನ ಸನ್ನಿಧಿಯಲ್ಲಿ ದುಷ್ಟರು ಇರಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದುಷ್ಟತನಕೆ ದೇವ, ನಿನಗಿಲ್ಲ ಒಲವು I ಕೆಟ್ಟತನಕೆ ನಿನ್ನ ಬಳಿಯಿಲ್ಲ ನಿಲುವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ದುಷ್ಟತನವನ್ನು ಮೆಚ್ಚುವ ದೇವರಲ್ಲ; ಕೆಡುಕರು ನಿಮ್ಮ ಬಳಿಯಲ್ಲಿ ವಾಸಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:4
16 ತಿಳಿವುಗಳ ಹೋಲಿಕೆ  

ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.


ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?


ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು. ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪು ಮಾಡನು.


ನಾವಾದರೋ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರುನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.


ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ.


ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ. ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


ಹೌದು, ನಿನ್ನನ್ನು ನಿನ್ನ ಆಲಯದಲ್ಲಿ ನೋಡಿದ್ದೇನೆ, ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ.


ಯೆಹೋವನೇ, ನೀನು ನನ್ನನ್ನು ತೊರೆದುಬಿಟ್ಟಿದ್ದೇಕೆ? ನೀನು ನನಗೆ ಕಿವಿಗೊಡದಿರುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು