Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:5 - ಪರಿಶುದ್ದ ಬೈಬಲ್‌

5 ನಿನ್ನನ್ನು ನಂಬದವರು ನಿನ್ನ ಬಳಿಗೆ ಬರಲಾರರು; ದುಷ್ಟರನ್ನು ನೀನು ದ್ವೇಷಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಲ್ಲಲಾರರು ನಿನ್ನ ಮುಂದೆ ಗರ್ವಿಗಳು I ನಿನಗೆ ವೈರಿಗಳಾಗುವರು ಅಧರ್ಮಿಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಸನ್ನಿಧಿಯಲ್ಲಿ ಗರ್ವಿಗಳು ನಿಂತುಕೊಳ್ಳಲಾರರು. ಅಧರ್ಮ ಮಾಡುವವರೆಲ್ಲರನ್ನು ನೀವು ದ್ವೇಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:5
21 ತಿಳಿವುಗಳ ಹೋಲಿಕೆ  

ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.


ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿಯೇ ನಾನು ಅವರನ್ನು ದ್ವೇಷಿಸಲು ಪ್ರಾರಂಭಿಸಿದೆನು. ಅವರು ಮಾಡುವ ದುಷ್ಕೃತ್ಯಗಳ ದೆಸೆಯಿಂದ ನಾನು ಅವರನ್ನು ನನ್ನ ಮನೆಯಿಂದ ಹೊರಡಿಸುವೆನು. ಇನ್ನು ಮುಂದೆ ಅವರನ್ನು ನಾನು ಪ್ರೀತಿಸುವುದಿಲ್ಲ. ಅವರ ನಾಯಕರು ನನಗೆ ವಿರುದ್ಧವಾಗಿ ದಂಗೆ ಎದ್ದವರು; ನನ್ನ ವಿರುದ್ಧವಾಗಿ ತಿರುಗಿಬಿದ್ದರು.


ನ್ಯಾಯತೀರ್ಪಿನ ಕಾಲ ಬಂದಾಗ ದುಷ್ಟರಿಗೆ ಅಪರಾಧಿಗಳೆಂದು ತೀರ್ಪಾಗುವುದು. ಪಾಪಿಗಳಿಗೆ ನೀತಿವಂತರ ಮಧ್ಯದಲ್ಲಿ ಸ್ಥಳವಿರುವುದಿಲ್ಲ.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಆ ದೇಶವನ್ನು ಬಿಟ್ಟುಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿಬಿಡುತ್ತಿದ್ದೇನೆ. ಯಾಕೆಂದರೆ ಅವರು ಆ ಪಾಪಗಳನ್ನೆಲ್ಲಾ ಮಾಡಿದರು. ನಾನು ಆ ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ!


ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು.


ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.


ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.


ನೀವು ಹರಕೆ ಮಾಡಿಕೊಂಡರೆ ತಡಮಾಡದೆ ಅದನ್ನು ನೆರವೇರಿಸಿ. ಮೂಢರ ವಿಷಯದಲ್ಲಿ ದೇವರಿಗೆ ಸಂತೋಷವಿಲ್ಲ. ನೀವು ದೇವರಿಗೆ ಹರಕೆ ಮಾಡಿಕೊಂಡದ್ದನ್ನು ಸಲ್ಲಿಸಿರಿ.


“ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?


“ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’” ಎಂದು ಹೇಳುವೆನು.


ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.


ದುಷ್ಟರೇ, ನೀವು ಮೂಢರಾಗಿದ್ದೀರಿ! ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ? ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ! ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು.


ನಿನಗೆ ಹೋಲಿಸಿದರೆ, ಜನರು ದಡ್ಡ ಪ್ರಾಣಿಗಳಂತಿದ್ದಾರೆ. ನಾವು ಯಾವುದನ್ನೂ ಅರ್ಥಮಾಡಿಕೊಳ್ಳಲಾಗದ ಮೂಢರಂತಿದ್ದೇವೆ.


ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.


ದುಷ್ಟರ ಏಳಿಗೆಯನ್ನು ಕಂಡು ಗರ್ವಿಷ್ಠರ ಮೇಲೆ ಅಸೂಯೆಗೊಂಡೆನು.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು