Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:16 - ಪರಿಶುದ್ದ ಬೈಬಲ್‌

16 ದೇವರು ದುಷ್ಟರಿಗೆ ಹೀಗೆನ್ನುವನು: “ನೀವು ನನ್ನ ಕಟ್ಟಳೆಗಳ ಕುರಿತು ಮಾತಾಡುವಿರಿ; ನನ್ನ ಒಡಂಬಡಿಕೆಯ ಕುರಿತು ಮಾತಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದುರ್ಜನರಿಗೆ ದೇವ ಹೇಳುವನು ಇಂತೆಂದು I “ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದುಷ್ಟರಿಗಾದರೋ ದೇವರು ಹೇಳುವದೇನಂದರೆ - ನನ್ನ ವಿಧಿಗಳನ್ನು ಪಠಿಸುವದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ನಿಬಂಧನೆಯನ್ನು ಉಚ್ಚರಿಸುವದು ನಿಮಗೇನು ಕೆಲಸ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ದುಷ್ಟನಿಗೆ ದೇವರು ಹೇಳುವುದೇನೆಂದರೆ: “ನನ್ನ ನಿಯಮಗಳನ್ನು ಪಠಿಸುವುದಕ್ಕೆ ಹಕ್ಕು ನಿಮಗೆ ಏನಿದೆ? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಛರಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:16
20 ತಿಳಿವುಗಳ ಹೋಲಿಕೆ  

ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.


ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.


ದೇವರು ಆತ್ಮಸ್ವರೂಪಿ. ಆದ್ದರಿಂದ ದೇವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು” ಎಂದು ಹೇಳಿದನು.


ಮೂಢನು ಜ್ಞಾನದ ಮಾತನ್ನು ಹೇಳಲು ಮಾಡುವ ಪ್ರಯತ್ನವು ಕುಂಟನು ನಡೆಯಲು ಮಾಡುವ ಪ್ರಯತ್ನದಂತಿದೆ.


ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.


ಆದರೆ ಒಬ್ಬ ಪಾಪಿ ಬದಲಾವಣೆ ಹೊಂದಿ ನೀತಿವಂತನಾಗಿ ಬಾಳಿದರೆ ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ಆದರೆ ಯೆಹೋವನು ಹೇಳುವುದೇನೆಂದರೆ, “ದುಷ್ಟರಿಗೆ ಸಮಾಧಾನವೇ ಸಿಗದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು