Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:21 - ಪರಿಶುದ್ದ ಬೈಬಲ್‌

21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:21
22 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ. ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


“ನಾನು ಬಹುಕಾಲದಿಂದ ಮೌನವಾಗಿದ್ದೆನು. ನಾನು ಏನೂ ಹೇಳದ ಹಾಗೆ ನನ್ನನ್ನು ನಿಯಂತ್ರಿಸಿಕೊಂಡಿದ್ದೆನು. ಈಗ ನಾನು ಹೆರಿಗೆ ಬೇನೆಯನ್ನು ಅನುಭವಿಸುವ ಹೆಂಗಸಿನಂತೆ ಕಿರುಚುವೆನು; ಗಟ್ಟಿಯಾಗಿ ಏದುಸಿರು ಬಿಡುವೆನು.


ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.


ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.


“ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!” ಎಂದು ಆ ದುಷ್ಟರು ಹೇಳಿಕೊಳ್ಳುವರು.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ದುಷ್ಟರಿಗೆ ದಯೆತೋರಿಸಿದರೆ ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು. ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.


ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ.


ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು.


ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ.


ಯೋಬನೇ, ನೀನು ಮಾರ್ಪಾಟಾಗದೆ ದೇವರಿಂದ ಪ್ರತಿಫಲವನ್ನು ಅಪೇಕ್ಷಿಸುವುದೇಕೆ? ಯೋಬನೇ, ಇದು ನಿನ್ನ ನಿರ್ಧಾರ, ನನ್ನದಲ್ಲ. ನಿನ್ನ ಆಲೋಚನೆಯನ್ನು ನನಗೆ ತಿಳಿಸು.


“ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು