Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:11 - ಪರಿಶುದ್ದ ಬೈಬಲ್‌

11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:11
23 ತಿಳಿವುಗಳ ಹೋಲಿಕೆ  

ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.


ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.


ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.


ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.


ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.


ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು. ನಂತರ ಯೆಹೋವನು ದುರಾತ್ಮವೊಂದನ್ನು ಸೌಲನ ಬಳಿಗೆ ಕಳುಹಿಸಿದನು. ಅದು ಅವನಿಗೆ ಬಹಳ ತೊಂದರೆ ಮಾಡಿತು.


ಸೌಲನು ಮತ್ತು ಅವನ ಸೇವಕನು ಗಿಬಿಯತ್ ಎಲೋಹಿಮಿಗೆ ಹೋದರು. ಸೌಲನು ಆ ಸ್ಥಳದಲ್ಲಿ ಪ್ರವಾದಿಗಳ ಸಮೂಹವನ್ನು ಸಂಧಿಸಿದನು. ದೇವರ ಆತ್ಮವು ಮಹಾಶಕ್ತಿಯೊಡನೆ ಸೌಲನ ಮೈಮೇಲೆ ಬಂದಿತು. ಆಗ ಸೌಲನು ಪ್ರವಾದಿಗಳ ಜೊತೆಯಲ್ಲಿ ಪ್ರವಾದಿಸಿದನು.


ಆಮೇಲೆ ದೆಲೀಲಳು ಅವನನ್ನು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತನು. “ಮುಂಚಿನಂತೆಯೇ ನಾನು ತಪ್ಪಿಸಿಕೊಳ್ಳುವೆನು” ಎಂದು ಅವನು ತಿಳಿದಿದ್ದನು. ಆದರೆ ಯೆಹೋವನು ಅವನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ಗೊತ್ತಾಗಲಿಲ್ಲ.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


ವೃದ್ಧಾಪ್ಯದಲ್ಲಿ ನನ್ನನ್ನು ತಳ್ಳಿಬಿಡಬೇಡ. ಬಲವು ಕುಂದಿ ಹೋಗುತ್ತಿರುವಾಗ ಕೈಬಿಡಬೇಡ.


ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ಕೀಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿ ದಂಗೆ ಎದ್ದನು.


ಆದರೆ ನಾನು ಅವನನ್ನು ಪ್ರೀತಿಸುವುದನ್ನು ನಿಲ್ಲಿಸುವುದಿಲ್ಲ. ಅವನು ಯಾವಾಗಲೂ ನನ್ನ ಕರುಣಾಶ್ರಯದಲ್ಲಿರುವನು. ಸೌಲನ ಮೇಲಿಟ್ಟಿದ್ದ ಪ್ರೀತಿಯನ್ನು ಮತ್ತು ದಯೆಯನ್ನು ಹಿಂತೆಗೆದುಕೊಂಡೆನು. ಸೌಲನನ್ನು ನಿನ್ನ ಎದುರಿನಿಂದ ನಾನು ದೂರ ತಳ್ಳಿದೆನು. ನಾನು ನಿನ್ನ ಕುಟುಂಬಕ್ಕೆ ಹಾಗೆ ಮಾಡುವುದಿಲ್ಲ.


ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.


ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”


ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? ಶತ್ರು ಬಾಧೆಯಿಂದ ನಾನೇಕೆ ದುಃಖಿಸುತ್ತಾ ಸಂಕಟಪಡಬೇಕು?


ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.


ಅವನು ಮಾಹಾನೆಹದಾನ ನಗರದಲ್ಲಿದ್ದಾಗ ಯೆಹೋವನ ಆತ್ಮವು ಸಂಸೋನನನ್ನು ಪ್ರೇರೇಪಿಸತೊಡಗಿತು. ಈ ನಗರವು ಚೊರ್ಗ ಮತ್ತು ಎಷ್ಟಾವೋಲ್ ನಗರಗಳ ಮಧ್ಯದಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು