Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:4 - ಪರಿಶುದ್ದ ಬೈಬಲ್‌

4 ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:4
23 ತಿಳಿವುಗಳ ಹೋಲಿಕೆ  

ಮಗನು ತನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.


ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”


ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.


ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ, “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.


ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು: “ನೀನೇ ವರ್ತಮಾನ ಕಾಲದಲ್ಲಿರುವಾತನು. ನೀನೊಬ್ಬನೇ ಪರಿಶುದ್ಧನು. ನೀನು ನೀಡಿದ ಈ ತೀರ್ಪುಗಳಲ್ಲೆಲ್ಲಾ ನೀನು ನ್ಯಾಯವಂತನಾಗಿರುವೆ.


ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.


ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.


ಯೆಹೋವನು ತನ್ನ ಜನರಿಗೆ ನ್ಯಾಯವಿಚಾರಣೆಗಾಗಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆಯುವನು.


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.


ಅವನು ದೋಷಿಯಾದ್ದರಿಂದ ಯೆಹೋವನಿಗೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಬೇಕು.”


“ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”


ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.


“ವ್ಯಭಿಚಾರ ಮಾಡಬಾರದು” ಎಂದು ದೇವರು ಹೇಳಿದನು. “ಕೊಲ್ಲಬಾರದು” ಎಂದೂ ಅದೇ ದೇವರು ಹೇಳಿದನು. ಹೀಗಿರಲಾಗಿ, ನೀವು ವ್ಯಭಿಚಾರವನ್ನು ಮಾಡದಿದ್ದರೂ ಯಾರನ್ನೇ ಆಗಲಿ ಕೊಂದರೆ, ದೇವರ ಇಡೀ ಧರ್ಮಶಾಸ್ತ್ರವನ್ನೇ ಉಲ್ಲಂಘಿಸಿದವರಾಗಿದ್ದೀರಿ.


ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.


“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು