Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:15 - ಪರಿಶುದ್ದ ಬೈಬಲ್‌

15 ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕೆಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದು ಹೋಗಲಿ. ಅವರ ಮನೆಯಲ್ಲಿಯೂ ಮನಸ್ಸಿನಲ್ಲಿಯೂ ಕೆಟ್ಟತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:15
13 ತಿಳಿವುಗಳ ಹೋಲಿಕೆ  

ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು. ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.


ಆದರೆ ದೇವರು ಇದ್ದಕ್ಕಿದ್ದಂತೆ ತನ್ನ ಬಾಣಗಳನ್ನು ಎಸೆಯುವನು. ಆಗ ಆ ದುಷ್ಟರು ಗಾಯಗೊಳ್ಳುವರು.


ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು.


ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.


ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.


ಯೋವಾಬನು, “ನಿನ್ನೊಂದಿಗೆ ನಾನಿಲ್ಲಿ ನನ್ನ ಕಾಲವನ್ನು ವ್ಯರ್ಥಮಾಡುವುದಿಲ್ಲ” ಎಂದನು. ಅಬ್ಷಾಲೋಮನು ಓಕ್ ಮರದಲ್ಲಿ ನೇತಾಡುತ್ತಾ ಇನ್ನೂ ಜೀವಂತವಾಗಿದ್ದನು. ಯೋವಾಬನು ಮೂರು ಬರ್ಜಿಗಳನ್ನು ತೆಗೆದುಕೊಂಡು ಅಬ್ಷಾಲೋಮನತ್ತ ಎಸೆದನು. ಬರ್ಜಿಗಳು ಅಬ್ಷಾಲೋಮನ ಹೃದಯವನ್ನು ಛೇದಿಸಿಕೊಂಡು ಹೋದವು.


ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು.


ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು