Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 56:13 - ಪರಿಶುದ್ದ ಬೈಬಲ್‌

13 ಯಾಕೆಂದರೆ ನೀನು ನನ್ನನ್ನು ಮರಣದಿಂದ ರಕ್ಷಿಸಿದೆ; ನೀನು ನನ್ನನ್ನು ಸೋಲಿನಿಂದ ತಪ್ಪಿಸಿದೆ. ಆದ್ದರಿಂದ, ಜೀವಂತರಾಗಿರುವ ಜನರು ಮಾತ್ರ ನೋಡಬಹುದಾದ ಬೆಳಕಿನಲ್ಲಿ ನಾನು ದೇವರನ್ನು ಆರಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನಗೆ ಹೊತ್ತ ಹರಕೆಗಳನ್ನು ಸಲ್ಲಿಸುವೆನು; ಕೃತಜ್ಞತಾಯಜ್ಞಗಳನ್ನು ಸಮರ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 56:13
20 ತಿಳಿವುಗಳ ಹೋಲಿಕೆ  

ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.


ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು.


ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.


ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ. ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.


ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


“ಯೆಹೋವನೇ, ನಾನು ನಿನಗೆ ಪೂರ್ಣಹೃದಯದಿಂದ ನಂಬಿಗಸ್ತನಾಗಿ ಸೇವೆಮಾಡಿದ್ದನ್ನು ಜ್ಞಾಪಿಸಿಕೋ. ನಿನಗೆ ಇಷ್ಟವಾದದ್ದನ್ನೆಲ್ಲ ನಾನು ಮಾಡಿದ್ದೇನೆ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ ಆತನು ನನಗೆ ಆಧಾರ ನೀಡಿದನು.


ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ಸರಿಯಾದ ಮಾರ್ಗಕ್ಕೆ ನಡೆಸುವವನು ಆ ಪಾಪಿಯ ಆತ್ಮವನ್ನು ಮರಣದಿಂದ ಪಾರುಮಾಡಿದವನೂ ಅನೇಕ ಪಾಪಗಳಿಗೆ ಕ್ಷಮಾಪಣೆಯಾಗುವಂತೆ ಮಾಡಿದವನೂ ಆಗುತ್ತಾನೆ.


ಅವರನ್ನು ಬಿಡುಗಡೆಗೊಳಿಸಬೇಕೆಂದು, ಅವರಂತೆಯೇ ಆಗಿ, ಮರಣ ಹೊಂದಿದನು. ಅವರು ಮರಣಭಯದಿಂದ, ಜೀವಮಾನವೆಲ್ಲ ಗುಲಾಮರಂತೆ ಜೀವಿಸುತ್ತಿದ್ದರು.


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.


ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು