Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 56:6 - ಪರಿಶುದ್ದ ಬೈಬಲ್‌

6 ಅವರು ಒಟ್ಟುಗೂಡಿ ನನ್ನನ್ನು ಕೊಲ್ಲಲು ನನ್ನ ಹೆಜ್ಜೆಯನ್ನೇ ಹಿಂಬಾಲಿಸಿಕೊಂಡು ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ ನನ್ನ ಹೆಜ್ಜೆ ಹಿಡಿದು ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ. ನನ್ನ ಪ್ರಾಣ ತೆಗೆಯಲು ಕುತೂಹಲದಿಂದ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 56:6
22 ತಿಳಿವುಗಳ ಹೋಲಿಕೆ  

ನನ್ನ ಶತ್ರುಗಳು ಒಟ್ಟುಗೂಡಿ ನನ್ನನ್ನು ಕೊಲ್ಲಲು ಆಲೋಚಿಸಿಕೊಂಡಿದ್ದಾರೆ.


ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ.


ಅವರು ಕೇಡುಮಾಡಬೇಕೆಂದಿದ್ದಾರೆ. ಅವರು ಯಾವಾಗಲೂ ಜಗಳವೆಬ್ಬಿಸುತ್ತಾರೆ.


ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)


ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.


ಬಳಿಕ ಯೇಸುವನ್ನು ಬಂಧಿಸಿದ್ದವರು ಆತನನ್ನು ಪ್ರಧಾನ ಯಾಜಕನಾದ ಕಾಯಫನ ಮನೆಗೆ ಕರೆದೊಯ್ದರು. ಅಲ್ಲಿ ಧರ್ಮೋಪದೇಶಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಒಟ್ಟಿಗೆ ಸೇರಿದ್ದರು.


ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.


ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.


ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಆ ಶತ್ರುವನ್ನು ನೀನು ಗೆಲ್ಲುವೆ.


ನನ್ನನ್ನು ಬಂಧಿಸಲು ನನ್ನ ವೈರಿಗಳು ನನಗೆ ಬಲೆಯೊಡ್ಡಿದ್ದಾರೆ. ನನ್ನನ್ನು ಬೀಳಿಸಲು ಕುಣಿ ತೋಡಿದರು. ಆದರೆ ಅವರೇ ಅದರಲ್ಲಿ ಬಿದ್ದುಹೋದರು.


ಕೆಡುಕರಾದರೋ ನೀತಿವಂತರಿಗೆ ಕೇಡುಮಾಡಲು ಹೊಂಚುಹಾಕುವರು.


ನಾನು ಮಾಡುವ ಪ್ರತಿಯೊಂದು ದೇವರಿಗೆ ಗೊತ್ತು ಮತ್ತು ನಾನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಆತನು ಗಮನಿಸುವನು.


ನಾನಿಡುವ ಪ್ರತಿ ಹೆಜ್ಜೆಯನ್ನೂ ನೀನು ಗಮನಿಸುವೆ. ಆದರೆ ನೀನು ನನ್ನ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಜನರು ನನ್ನ ಸುತ್ತಲೂ ಗುಂಪುಕೂಡಿದ್ದಾರೆ; ಅವರು ನನ್ನ ಮುಖಕ್ಕೆ ಹೊಡೆದು ಗೇಲಿ ಮಾಡುತ್ತಿದ್ದಾರೆ.


ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು