Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:11 - ಪರಿಶುದ್ದ ಬೈಬಲ್‌

11 ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀತಿವಂತನಿಗೆ ಫಲವುಂಟೆಂತಲೂ ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಜನರು ಹೀಗೆ ಹೇಳಿಕೊಳ್ಳುವರು, “ನಿಶ್ಚಯವಾಗಿ ನೀತಿವಂತನಿಗೆ ಫಲವಿದೆ. ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯತೀರಿಸುವ ದೇವರು ಇದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:11
20 ತಿಳಿವುಗಳ ಹೋಲಿಕೆ  

ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.


ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.


ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.


ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು. ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ನೀವು, “ದೇವರಾದ ಯೆಹೋವನನ್ನು ಆರಾಧಿಸುವುದು ನಿಷ್ಪ್ರಯೋಜಕ. ಆತನ ಕಟ್ಟಳೆಗಳನ್ನು ನಾವು ಅನುಸರಿಸಿದೆವು. ಆದರೆ ಅದರಲ್ಲಿ ನಮಗೇನೂ ಲಾಭವಾಗಲಿಲ್ಲ. ಸಮಾಧಿಯಲ್ಲಿ ಜನರು ರೋದಿಸುವ ಹಾಗೆ ನಮ್ಮ ಪಾಪಗಳಿಗಾಗಿ ನಾವು ರೋದಿಸಿದೆವು. ಆದರೆ ಅದರಿಂದ ನಮಗೇನೂ ಸಹಾಯವಾಗಲಿಲ್ಲ.


ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.


ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.


ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.


ಇಡೀಲೋಕದ ನ್ಯಾಯಾಧಿಪತಿ ನೀನೇ. ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು.


ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು. ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪು ಮಾಡನು.


ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು; ನಾನು ತಪ್ಪನ್ನು ಮಾಡಿಲ್ಲದ ಕಾರಣ ನನಗೆ ಒಳ್ಳೆಯದನ್ನು ಮಾಡಿದನು.


ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು.


ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


ನಾನಾದರೋ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ.


ಇಗೋ, ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. ನನ್ನ ರಾಜನಾದ ಪರಿಶುದ್ಧ ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ.


ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು. ದುಷ್ಟರು ಇದನ್ನು ಕಂಡು ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು