Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:12 - ಪರಿಶುದ್ದ ಬೈಬಲ್‌

12 ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರ ಬಾಯಿಂದ ಬರುವದೆಲ್ಲಾ ಪಾಪವೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರ ಬಾಯಿಯ ಪಾಪಕ್ಕೂ, ಅವರ ತುಟಿಗಳ ಮಾತಿಗೂ, ಅವರು ನುಡಿಯುವ ಶಾಪಕ್ಕೂ ಅವರ ಗರ್ವವೇ ಅವರನ್ನು ಹಿಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:12
20 ತಿಳಿವುಗಳ ಹೋಲಿಕೆ  

ಕೆಡುಕನು ತನ್ನ ಕೆಟ್ಟಮಾತುಗಳಿಂದಲೇ ಸಿಕ್ಕಿಕೊಳ್ಳುವನು. ಆದರೆ ಒಳ್ಳೆಯವನು ಇಕ್ಕಟ್ಟುಗಳಿಂದ ಪಾರಾಗುವನು.


ಮೂಢನು ಮಾತಿನಲ್ಲಿ ತನ್ನನ್ನೇ ನಾಶಪಡಿಸಿಕೊಳ್ಳುವನು. ಅವನ ಮಾತುಗಳೇ ಅವನಿಗೆ ಬಲೆಯಾಗುತ್ತವೆ.


ಅವರು ಯಾವಾಗಲೂ ಶಪಿಸುತ್ತಾರೆ; ಕೆಟ್ಟ ಮಾತುಗಳನ್ನು ಆಡುತ್ತಾರೆ, ಕುಯುಕ್ತಿಗಳನ್ನು ಮಾಡುತ್ತಾರೆ.


ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದ್ದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿತಿರುಗಿ ಕೊಲೆ ಮಾಡುತ್ತಾರೆ.


ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು.


ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.


“ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.


ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.


“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.


ನೀತಿಯು ಯಥಾರ್ಥವಂತರನ್ನು ಕಾಪಾಡುತ್ತದೆ. ಆದರೆ ವಂಚಕರು ತಮ್ಮ ಆಸೆಗಳಿಂದಲೇ ಸಿಕ್ಕಿಬೀಳುವರು.


ಮಾಡಿದ್ದರೆ, ಸಿಕ್ಕಿಕೊಂಡಿರುವೆ! ನಿನ್ನ ಸ್ವಂತ ಮಾತೇ ನಿನ್ನನ್ನು ಬಲೆಗೆ ಸಿಕ್ಕಿಸಿದೆ!


ಒಡೆಯನೇ, ನಮ್ಮ ಸುತ್ತಮುತ್ತಲಿನ ಜನರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಏಳರಷ್ಟು ದಂಡಿಸು. ನಿನಗೆ ಅವಮಾನಮಾಡಿದ್ದರಿಂದ ಅವರನ್ನು ದಂಡಿಸು.


ದೇವರು ಭೂಲೋಕದ ನಾಯಕರುಗಳನ್ನು ಮೂಢರನ್ನಾಗಿ ಮಾಡುವನು; ರಸ್ತೆಯಿಲ್ಲದ ಮರಳುಗಾಡಿನಲ್ಲಿ ಅವರನ್ನು ಅಲೆದಾಡಿಸುವನು.


ನನ್ನ ಶತ್ರುಗಳ ಮಾತುಗಳು ಮತ್ತು ಆಲೋಚನೆಗಳು ಯಾವಾಗಲೂ ನನಗೆ ವಿರೋಧವಾಗಿವೆ.


“ಆದರೆ ನಾನು ಅವರಲ್ಲಿ ಕೆಲವರನ್ನು ಯುದ್ಧಗಳಿಂದ, ಬರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನ್ನು ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು