Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:4 - ಪರಿಶುದ್ದ ಬೈಬಲ್‌

4 ಅವರು ನನ್ನ ಮೇಲೆ ಆಕ್ರಮಣಮಾಡಲು ಬರುತ್ತಿದ್ದಾರೆ, ಆದರೆ ನಾನೇನು ತಪ್ಪು ಮಾಡಿಲ್ಲ. ಯೆಹೋವನೇ, ಸ್ವತಃ ನೀನೇ ಬಂದು ನೋಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿರಪರಾಧಿ, ನಿರ್ದೋಷಿ ನಾನಾದರು I ಮೇಲೆ ಬೀಳಲಿದೋ ಸಜ್ಜುಗೊಂಡಿಹರು I ಎಚ್ಚೆತ್ತು ಪ್ರಭು, ನನಗೆ ನೆರವಾಗಿರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಓಡಿಬಂದು ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಹಾನಿಮಾಡಲು ಸಿದ್ಧರಾಗಿದ್ದಾರೆ. ನನ್ನ ಅವಸ್ಥೆಯನ್ನು ನೋಡಿರಿ, ನನಗೆ ಸಹಾಯ ಮಾಡುವುದಕ್ಕೆ ಸಿದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:4
13 ತಿಳಿವುಗಳ ಹೋಲಿಕೆ  

ಎಚ್ಚರಗೊಳ್ಳು! ಎದ್ದೇಳು! ನನ್ನ ದೇವರೇ, ಯೆಹೋವನೇ, ನನಗಾಗಿ ಹೋರಾಡು; ನನಗೆ ನ್ಯಾಯವನ್ನು ದೊರಕಿಸು.


“ಹಿಂಸಿಸಲು ಮತ್ತು ಕೊಲ್ಲಲು ಜನರು ಯಾವಾಗಲೂ ಸಿದ್ಧರಾಗಿದ್ದಾರೆ.


ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.


ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಕೃತ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ.


ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.


ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.


ನನ್ನ ಒಡೆಯನೇ, ಎದ್ದೇಳು! ನೀನು ನಿದ್ರಿಸುತ್ತಿರುವುದೇಕೆ? ಎದ್ದೇಳು! ನಮ್ಮನ್ನು ಶಾಶ್ವತವಾಗಿ ಕೈಬಿಡಬೇಡ.


ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.


ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.


ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.


ಯೋನಾತಾನನು ತನ್ನ ತಂದೆಯಾದ ಸೌಲನೊಂದಿಗೆ ಮಾತನಾಡಿದನು. ಯೋನಾತಾನನು ದಾವೀದನ ಬಗ್ಗೆ ಒಳ್ಳೆಯ ಸಂಗತಿಗಳನ್ನು ತಿಳಿಸಿದನು. ಯೋನಾತಾನನು, “ನೀನು ರಾಜ. ದಾವೀದನು ನಿನ್ನ ಸೇವಕ. ದಾವೀದನು ನಿನಗೆ ಯಾವ ಕೇಡನ್ನೂ ಮಾಡಿಲ್ಲ. ಆದ್ದರಿಂದ ಅವನಿಗೆ ಯಾವ ಕೇಡನ್ನೂ ಮಾಡಬೇಡ. ದಾವೀದನು ನಿನಗೆ ಯಾವಾಗಲೂ ಒಳ್ಳೆಯವನಾಗಿಯೇ ಇದ್ದಾನೆ.


ದೇವರೇ, ಅವರ ದುಷ್ಟತನದ ನಿಮಿತ್ತ ಅವರನ್ನು ಸೆರೆಯಾಳುಗಳಾಗಿ ಕಳುಹಿಸು. ಅವರು ಅನ್ಯ ಜನಾಂಗಗಳ ಕೋಪವನ್ನು ಅನುಭವಿಸುವಂತೆ ಹೊರಗಟ್ಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು