Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:1 - ಪರಿಶುದ್ದ ಬೈಬಲ್‌

1 ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಪುನರ್‌ಸ್ಥಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಕೋಪದಿಂದ ನಮ್ಮನ್ನು ತಳ್ಳಿಕೆಡವಿ ಬಿಟ್ಟಿದ್ದೀ; ನಮ್ಮನ್ನು ಎತ್ತಿ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:1
36 ತಿಳಿವುಗಳ ಹೋಲಿಕೆ  

ಹದದೆಜೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಜೆರನನ್ನು ಸೋಲಿಸಿದನು.


ಆದರೆ, ದೇವರೇ, ಈಗ ನೀನು ನಮ್ಮನ್ನು ಕೈಬಿಟ್ಟಿರುವೆ. ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ. ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ.


ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.


ಆಗ ದಾವೀದನು ಬಾಳ್‌ಪೆರಾಚೀಮ್‌ಗೆ ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದ್ದರಿಂದ ಅವನು ಆ ಸ್ಥಳಕ್ಕೆ “ಬಾಳ್‌ಪೆರಾಚೀಮ್” ಎಂದು ಹೆಸರಿಟ್ಟನು.


ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು.


ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.


ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.


ಆತನು ಹೇಳಿದ್ದೇನೆಂದರೆ: “ನಾನು ಆರಿಸಿಕೊಂಡ ರಾಜನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ನನ್ನ ಸೇವಕನಾದ ದಾವೀದನಿಗೆ ಒಂದು ವಾಗ್ದಾನವನ್ನು ಮಾಡಿದೆನು; ಅದೇನೆಂದರೆ,


ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸು. ನಮ್ಮನ್ನು ರಕ್ಷಿಸು! ನಮ್ಮನ್ನು ಸ್ವೀಕರಿಸು!


ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ?


ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?


ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು.


ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು.


ಅಮಚ್ಯನು ಧೈರ್ಯಗೊಂಡು ತನ್ನ ಸೈನ್ಯವನ್ನು ಎದೋಮ್ ರಾಜ್ಯದ ಉಪ್ಪಿನ ಕಣಿವೆಗೆ ನಡಿಸಿದನು. ಆ ಸ್ಥಳದಲ್ಲಿ ಅವನ ಸೈನಿಕರು ಸೇಯೀರಿನ ಹತ್ತು ಸಾವಿರ ಮಂದಿಯನ್ನು ಕೊಂದರು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಸಮುವೇಲನು, “ನೀನು ಮಾಡಿದ್ದೇನು?” ಎಂದು ಕೇಳಿದನು. ಸೌಲನು, “ಸೈನಿಕರು ನನ್ನನ್ನು ಬಿಟ್ಟುಹೋಗುತ್ತಿರುವುದನ್ನೂ ನೀನು ನಿಯಮಿತಕಾಲದಲ್ಲಿ ಇಲ್ಲಿ ಇಲ್ಲದಿರುವುದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಒಟ್ಟುಗೂಡುತ್ತಿರುವುದನ್ನೂ ನೋಡಿದೆನು.


ಆ ಬೆನ್ಯಾಮೀನ್ಯನು, “ಇಸ್ರೇಲರು ಫಿಲಿಷ್ಟಿಯರಿಂದ ಸೋತು, ಹಿಮ್ಮೆಟ್ಟಿದರು. ಇಸ್ರೇಲರ ಪಡೆಯು ಅನೇಕ ಸೈನಿಕರನ್ನು ಕಳೆದುಕೊಂಡಿತು. ನಿನ್ನ ಮಕ್ಕಳಿಬ್ಬರೂ ಸತ್ತರು. ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು” ಎಂದು ಹೇಳಿದನು.


ದೇವರೇ, ನೀನು ನಮ್ಮನ್ನು ತ್ಯಜಿಸಿ, ನಮ್ಮ ಸೈನ್ಯದೊಡನೆ ಹೋಗದಿರುವುದು ನಿಜವೇ?


ನಮ್ಮ ರಕ್ಷಕನಾದ ದೇವರೇ, ನಮಗೆ ಸಹಾಯಮಾಡು! ನಿನ್ನ ಹೆಸರಿನ ಘನತೆಗಾಗಿ ನಮಗೆ ಸಹಾಯಮಾಡು! ನಮ್ಮನ್ನು ರಕ್ಷಿಸಿ ನಿನ್ನ ಹೆಸರಿನ ಘನತೆಗೋಸ್ಕರ ನಮ್ಮ ಪಾಪಗಳನ್ನು ಅಳಿಸಿಬಿಡು.


ಯೂಫ್ರೇಟೀಸ್ ನದಿಯ ಮತ್ತೊಂದು ತೀರದಲ್ಲಿ ವಾಸಿಸುತ್ತಿದ್ದ ಅರಾಮ್ಯರನ್ನು ಕರೆತರಲು ಹದದೆಜೆರನು ಸಂದೇಶಕರನ್ನು ಕಳುಹಿಸಿದನು. ಈ ಅರಾಮ್ಯರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.


ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.


ಆದರೆ ನೀನು ಅಭಿಷೇಕಿಸಿದ ರಾಜನ ಮೇಲೆ ನೀನು ಕೋಪಗೊಂಡಿದ್ದರಿಂದಲೇ ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಟ್ಟೆ.


ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.


ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು