Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:2 - ಪರಿಶುದ್ದ ಬೈಬಲ್‌

2 ನೀನು ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿರುವೆ. ನಮ್ಮ ದೇಶವು ಕುಸಿದುಬೀಳುತ್ತಿದೆ; ಅದನ್ನು ಸರಿಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾಡನು ನಡುಗಿಸಿ ಬಿಡಿಬಿಡಿಯಾಗಿಸಿದೆ I ಅದರೊಡಕನು ಸರಿಮಾಡು ತಡವರಿಸದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ದೇಶವನ್ನು ಕಂಪನಗೊಳಿಸಿ ಒಡೆದು ಬಿಟ್ಟಿದ್ದೀ. ಅದರ ಒಡಕುಗಳನ್ನು ಸರಿಮಾಡು; ಅದು ನಡುಗುತ್ತಿರುವದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇಶವು ಕಂಪನಗೊಂಡು ಒಡೆದುಹೋಗಿದೆ. ಅದರ ಬಿರುಕುಗಳನ್ನು ಸ್ವಸ್ಥಮಾಡಿರಿ, ಅದು ನಡುಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:2
30 ತಿಳಿವುಗಳ ಹೋಲಿಕೆ  

ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.


“ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟೆಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.”


ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ನಾನು ಪರ್ವತಗಳ ಕಡೆಗೆ ನೋಡಿದೆ, ಅವುಗಳು ನಡುಗುತ್ತಿದ್ದವು. ಎಲ್ಲಾ ಬೆಟ್ಟಗಳು ಅದರುತ್ತಿದ್ದವು.


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ನಡುಗಿತು; ಪರ್ವತಗಳ ಬುನಾದಿಗಳು ಕಂಪಿಸಿದವು.


ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು.


ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದದ್ದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು.


ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗುಮುರುಗಾಗುವುದು.”


ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


“ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ ಮಗಳಿಗಾಗಿ ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಬಡಿದಿದ್ದಾರೆ, ಅವರಿಗೆ ಬಹಳ ಗಾಯಗಳಾಗಿವೆ.


ಯಾಕೋಬನ ದೇವರೂ ಒಡೆಯನೂ ಆಗಿರುವ ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು.


ಆತನು ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುವನು; ಅದರ ಅಸ್ತಿವಾರಗಳನ್ನು ನಡುಗಿಸುವನು.


ದಮಸ್ಕದಲ್ಲಿ ರೆಚೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು.


ಆತನು ಭೂಮಿಯ ಕಡೆಗೆ ನೋಡಿದರೆ ಸಾಕು, ಭೂಮಿಯು ನಡುಗುವುದು; ಆತನು ಬೆಟ್ಟಗಳನ್ನು ಮುಟ್ಟಿದರೆ ಸಾಕು, ಅವು ಜ್ವಾಲಾಮುಖಿಗಳಾಗುತ್ತವೆ.


ಅವನ ಪಟ್ಟಣದ ಗೋಡೆಗಳನ್ನು ಕೆಡವಿಹಾಕಿದೆ; ಅವನ ರಕ್ಷಣಾದುರ್ಗಗಳನ್ನೆಲ್ಲಾ ನಾಶಮಾಡಿದೆ.


ಗಾಯ ಮಾಡುವವನೂ ಗಾಯ ಕಟ್ಟುವವನೂ ಆತನೇ. ಆತನು ಗಾಯಮಾಡಿದರೂ ಆತನ ಕೈಗಳೇ ವಾಸಿಮಾಡುತ್ತವೆ.


ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.


ಆಗ ಭೂಮಿಯು ಗಡಗಡನೆ ನಡುಗಿತು. ಆಕಾಶದ ಅಡಿಪಾಯಗಳು ಅಲುಗಾಡಿದವು. ಏಕೆಂದರೆ ಯೆಹೋವನಿಗೆ ಸಿಟ್ಟೇರಿತ್ತು!


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹುವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು.


ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.


ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು.


ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು