Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:3 - ಪರಿಶುದ್ದ ಬೈಬಲ್‌

3 ನೀನು ನಿನ್ನ ಜನರಿಗೆ ಅನೇಕ ಕಷ್ಟಗಳನ್ನು ಕೊಟ್ಟಿರುವೆ. ನಾವು ಕುಡಿದವರಂತೆ ತೂರಾಡುತ್ತಾ ಬೀಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ಭ್ರಮಣಮದ್ಯವನ್ನು ಕುಡಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:3
16 ತಿಳಿವುಗಳ ಹೋಲಿಕೆ  

ನನ್ನನ್ನು ಅನೇಕ ಕಷ್ಟಹಿಂಸೆಗಳಿಗೆ ಗುರಿಮಾಡಿದಾತನು ನೀನೇ. ಆದರೆ ಅವೆಲ್ಲವುಗಳಿಂದ ನೀನು ನನ್ನನ್ನು ರಕ್ಷಿಸಿ ಜೀವಂತವಾಗಿ ಉಳಿಸಿದೆ. ಆಪತ್ತುಗಳಿಂದ ನಾನೆಷ್ಟೇ ಮುಳುಗಿಹೋಗಿದ್ದರೂ ಮೇಲೆತ್ತಿದಾತನು ನೀನೇ.


ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವುದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ.


ಜೆರುಸಲೇಮೇ, ಎಚ್ಚರಗೊಳ್ಳು; ಎದ್ದೇಳು; ಯೆಹೋವನು ನಿನ್ನ ಮೇಲೆ ಬಹಳವಾಗಿ ಕೋಪಗೊಂಡು ನಿನ್ನನ್ನು ಶಿಕ್ಷಿಸಿದ್ದಾನೆ. ಆ ಶಿಕ್ಷೆಯು ವಿಷತುಂಬಿದ ಪಾತ್ರೆಯಂತಿದೆ. ನೀನು ಅದನ್ನು ಕುಡಿಯಲೇಬೇಕಿತ್ತು. ಈಗ ನೀನು ಅದನ್ನು ಕುಡಿದಿರುವೆ.


ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.


ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷ ದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!


ಅವರು ದುಃಖದಿಂದ ಗೋಳಾಡುತ್ತಾ ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ! ಅವಳು ನಯವಾದ ನಾರುಮಡಿಯನ್ನು, ಧೂಮ್ರವರ್ಣದ ಉಡುಪನ್ನು ಮತ್ತು ರಕ್ತಾಂಬರಗಳನ್ನು ಧರಿಸಿದ್ದಳು. ಅವಳು ಚಿನ್ನ, ರತ್ನ, ಮುತ್ತುಗಳಿಂದ ಶೋಭಿಸುತ್ತಿದ್ದಳು!


ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.


“ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಆ ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ಆ ವ್ಯಕ್ತಿಯು ಆ ಕೋಪವನ್ನು ರುಚಿನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದುಬೀಳುವನು. “ದುಷ್ಟ ಅಧಿಪತಿಯೇ, ನೀನು ಆ ಪಾತ್ರೆಯಿಂದ ಕುಡಿಯುವೆ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ.


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.


ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.


ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ? ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ?


ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ.


ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ? ನಮ್ಮ ಮೇಲೆ ತಲತಲಾಂತರಗಳವರೆಗೂ ಕೋಪವನ್ನು ಬೆಳೆಸಬೇಕೆಂದಿರುವೆಯಾ?


ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು