Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:6 - ಪರಿಶುದ್ದ ಬೈಬಲ್‌

6 ದೇವರು ತನ್ನ ಆಲಯದೊಳಗೆ ಹೀಗೆಂದನು: “ನಾನು ಅವರಿಗೆ ಶೆಕೆಮನ್ನು ಕೊಡುವೆನು; ಸುಕ್ಕೋತ್ ಕಣಿವೆಯನ್ನೂ ಅವರಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗರ್ಭಗುಡಿಯಿಂದಲೇ ದೇವನಿಂತೆಂದನು; “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದು ಕೊಡುವೆನು ಸುಖೋತೆಂಬ ಬಯಲನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬೈಲನ್ನು ಅಳೆದುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:6
21 ತಿಳಿವುಗಳ ಹೋಲಿಕೆ  

ಆ ಪ್ರದೇಶವು ಬೇತ್‌ಹಾರಾಮ್, ಬೇತ್‌ನಿಮ್ರಾ, ಸುಕ್ಕೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಈ ಪ್ರದೇಶವು ಜೋರ್ಡನ್ ನದಿಯ ಪೂರ್ವ ಭಾಗದಲ್ಲಿತ್ತು. ಈ ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು.


ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.


ನನ್ನ ಪವಿತ್ರತ್ವದ ಮೇಲೆ ಆಣೆಯಿಟ್ಟು ದಾವೀದನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದೆನು. ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.


ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನೆಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು.


ಮಹಾಭಂಡಾರವನ್ನು ಕಂಡುಕೊಂಡವನಂತೆ ನಾನು ನಿನ್ನ ವಾಕ್ಯದಲ್ಲಿ ಸಂತೋಷಿಸುವೆನು.


ನಾನು ದೇವರಲ್ಲಿ ಭರವಸೆ ಇಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು? ದೇವರ ವಾಗ್ದಾನಕ್ಕಾಗಿ ಆತನನ್ನು ಕೊಂಡಾಡುವೆನು.


ಮನಸ್ಸೆ ಕುಲದವರ ಪ್ರದೇಶಗಳು ಆಶೇರ್ ಮತ್ತು ಶೆಕಮಿನ ಹತ್ತಿರವಿದ್ದ ಮಿಕ್ಮೆತಾತಿನ ಮಧ್ಯದಲ್ಲಿ ಬರುತ್ತವೆ. ಅದರ ಸೀಮೆಯು ದಕ್ಷಿಣದಲ್ಲಿ ಎನ್‌ತಪ್ಪೂಹ ಪ್ರದೇಶಕ್ಕೆ ಮುಟ್ಟುತ್ತದೆ.


“ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ.


ಪ್ರವಾದಿಗಳಿಗೊಂದು ಸಂದೇಶ. ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದುಹೋಗಿದೆ. ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.


ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.


ಅದನ್ನು ಈಗಲೇ ಮಾಡಿರಿ! ಯೆಹೋವನು ದಾವೀದನ ಬಗ್ಗೆ ಮಾತಾಡುತ್ತಾ, ‘ನನ್ನ ಜನರಾದ ಇಸ್ರೇಲರನ್ನು ಫಿಲಿಷ್ಟಿಯರಿಂದಲೂ ಬೇರೆಲ್ಲಾ ಶತ್ರುಗಳಿಂದಲೂ ನನ್ನ ಸೇವಕನಾದ ದಾವೀದನ ಮೂಲಕ ಸಂರಕ್ಷಿಸುತ್ತೇನೆ’” ಎಂದು ಹೇಳಿದ್ದಾನೆ.


ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು.


ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು