Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:7 - ಪರಿಶುದ್ದ ಬೈಬಲ್‌

7 ಗಿಲ್ಯಾದ್ ಮತ್ತು ಮನಸ್ಸೆ ನನ್ನವೇ. ಎಫ್ರಾಯೀಮ್ ನನ್ನ ಶಿರಸ್ತ್ರಾಣ. ಯೆಹೂದ ನನ್ನ ರಾಜದಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣವು ನನಗೆ I ಜೂದ ಕುಲವು ರಾಜದಂಡವು ನನ್ನ ಕೈಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:7
9 ತಿಳಿವುಗಳ ಹೋಲಿಕೆ  

ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”


ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು.


ಜೋರ್ಡನ್ ಹೊಳೆಯ ಪೂರ್ವಪ್ರಾಂತ್ಯದಲ್ಲಿದ್ದ ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧಕುಲಗಳಿಂದ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ. ಇವರು ಎಲ್ಲಾ ತರದ ಆಯುಧಗಳಲ್ಲಿ ಪರಿಣತರಾಗಿದ್ದರು.


ಮನಸ್ಸೆಕುಲದಿಂದಲೂ ಕೆಲವರು ದಾವೀದನನ್ನು ಸೇರಿಕೊಂಡರು. ದಾವೀದನು ಸೌಲನೊಂದಿಗೆ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಸೇರಿಕೊಂಡಾಗ ಮನಸ್ಸೆಯವರು ದಾವೀದನ ಬಳಿಗೆ ಬಂದರು. ದಾವೀದನೂ ಅವನ ಜನರೂ ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಿರಲಿಲ್ಲ. ಫಿಲಿಷ್ಟಿಯ ಪ್ರಧಾನರು ದಾವೀದನು ಯುದ್ಧಕ್ಕೆ ಬರಬಾರದೆಂದು ಹೇಳಿ ಹಿಂದಕ್ಕೆ ಕಳುಹಿಸಿದರು. “ಇವನು ತನ್ನ ಅರಸನೊಟ್ಟಿಗೆ ಸೇರಿದರೆ ನಮ್ಮ ರುಂಡಗಳೇ ಕತ್ತರಿಸಲ್ಪಡುವವು” ಎಂದರು.


ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.


ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು.


ದೇವರು ತನ್ನ ಆಲಯದೊಳಗಿಂದ ಹೀಗೆಂದನು: “ನಾನು ಯುದ್ಧದಲ್ಲಿ ಗೆದ್ದು ಜಯಘೋಷ ಮಾಡುವೆನು; ಶೆಕೆಮ್ ಪ್ರದೇಶವನ್ನೂ ಸುಕ್ಕೋತ್ ಬಯಲನ್ನೂ ನನ್ನ ಜನರಿಗೆ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು