Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:4 - ಪರಿಶುದ್ದ ಬೈಬಲ್‌

4 ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿದ್ದು ನಿರ್ಭಯದಿಂದ ನೀತಿವಂತನ ಮೇಲೆ ಆ ಬಾಣಗಳನ್ನು ಎಸೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗುಟ್ಟಾದೆಡೆಯಿಂದ ಗುರಿಯಿಟ್ಟಿಹರು ನಿರಪರಾಧಿಗಳನೆ I ಅಂಜದೇ ಅಳುಕದೆ ಎಸೆವರು ಬಾಣಗಳನು ತಟ್ಟನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿರ್ದೋಷಿಯ ಕಡೆಗೆ ಕಹಿಮಾತುಗಳನ್ನು ಬಾಣದಂತೆ ಗುರಿಯಿಟ್ಟಿದ್ದಾರೆ. ಅಂಜದೆ ಫಕ್ಕನೆ ಅವನ ಕಡೆಗೆ ಎಸೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:4
14 ತಿಳಿವುಗಳ ಹೋಲಿಕೆ  

ದೇವರು ನನಗೆ ಕಿವಿಗೊಡುವನು. ಅನಾದಿಕಾಲದ ರಾಜನು ನನಗೆ ಸಹಾಯ ಮಾಡುವನು. ನನ್ನ ವೈರಿಗಳು ತಮ್ಮ ಜೀವಿತಗಳನ್ನು ಪರಿವರ್ತಿಸಿಕೊಳ್ಳುವುದಿಲ್ಲ. ಅವರಿಗೆ ದೇವರಲ್ಲಿ ಭಯಭಕ್ತಿಯಿಲ್ಲ.


ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.


ಮಹಾಯಾಜಕರು ಮತ್ತು ಯೆಹೂದ್ಯ ಕಾವಲುಗಾರರು ಯೇಸುವನ್ನು ಕಂಡು, “ಅವನನ್ನು ಶಿಲುಬೆಗೆ ಹಾಕಿಸು! ಅವನನ್ನು ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಆದರೆ ಪಿಲಾತನು, “ನೀವೇ ಆತನನ್ನು ಶಿಲುಬೆಗೆ ಹಾಕಿರಿ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.


ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನೂ ಸುಲಭವಾಗಿ ಗೆಲ್ಲುವೆವೆಂದು ಅವರು ನೆನೆಸಿದ್ದರು.


ಆದರೆ ದೇವರು ಇದ್ದಕ್ಕಿದ್ದಂತೆ ತನ್ನ ಬಾಣಗಳನ್ನು ಎಸೆಯುವನು. ಆಗ ಆ ದುಷ್ಟರು ಗಾಯಗೊಳ್ಳುವರು.


ಅಲ್ಲದೆ ನಮ್ಮ ವೈರಿಗಳು, ‘ನಾವು ಅವರ ಮೇಲೆ ಇದ್ದಕ್ಕಿದ್ದಂತೆ ಆಕ್ರಮಣ ಮಾಡುವುದರಿಂದ ನಾವು ಅವರ ಮಧ್ಯದಲ್ಲಿರುವ ತನಕ ಅವರಿಗೆ ಗೊತ್ತಾಗುವುದೂ ಇಲ್ಲ ಕಾಣುವುದೂ ಇಲ್ಲ. ನಾವು ಅವರನ್ನು ಕೊಂದಾಗ ಕೆಲಸ ತಾನಾಗಿಯೇ ನಿಂತುಹೋಗುವುದು’ ಎಂದು ಹೇಳುತ್ತಿದ್ದಾರೆ” ಎಂದರು.


ಆಗ ದಾವೀದನು ಜೆರುಸಲೇಮಿನಲ್ಲಿ ತನ್ನೊಂದಿಗಿದ್ದ ತನ್ನ ಸೇವಕರಿಗೆಲ್ಲ, “ನಾವು ತಪ್ಪಿಸಿಕೊಳ್ಳಲೇಬೇಕು! ನಾವು ತಪ್ಪಿಸಿಕೊಳ್ಳದಿದ್ದರೆ ಅಬ್ಷಾಲೋಮನು ನಮ್ಮನ್ನು ಹೋಗಗೊಡಿಸುವುದಿಲ್ಲ. ಅಬ್ಷಾಲೋಮನು ನಮ್ಮನ್ನು ಹಿಡಿಯುವುದಕ್ಕಿಂತ ಮೊದಲೇ ಇಲ್ಲಿಂದ ಹೋಗಿಬಿಡೋಣ. ಅವನು ನಮ್ಮೆಲ್ಲರನ್ನೂ ನಾಶಮಾಡುತ್ತಾನೆ; ಅವನು ಜೆರುಸಲೇಮಿನ ಜನರನ್ನು ಕೊಂದುಹಾಕುತ್ತಾನೆ” ಎಂದು ಹೇಳಿದನು.


ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ಸೌಲನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಸರಿದುಕೊಂಡಿದ್ದರಿಂದ ಈಟಿಯು ಗೋಡೆಗೆ ನಾಟಿಕೊಂಡಿತು. ದಾವೀದನು ಆ ದಿನ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.


ಸೌಲನ ಕೈಯಲ್ಲಿ ಒಂದು ಈಟಿಯಿತ್ತು. “ಗೋಡೆಗೆ ಹತ್ತಿಕೊಳ್ಳುವಂತೆ ನಾನು ದಾವೀದನನ್ನು ತಿವಿಯುವೆ” ಎಂದು ಅವನು ಯೋಚಿಸಿ ಎರಡು ಬಾರಿ ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಲವೂ ತಪ್ಪಿಸಿಕೊಂಡನು.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.


ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು