Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:6 - ಪರಿಶುದ್ದ ಬೈಬಲ್‌

6 ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ. ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ಹೂಡಿರುವುದು ಕುತಂತ್ರವನು I ಕೊಚ್ಚಿಕೊಳ್ವುದು ಚತುರೋಪಾಯವನು I ಅಶೋಧ್ಯ ಮಾನವನ ಹೃನ್ಮನಗಳು! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಕೆಡುಕನ್ನು ಕಲ್ಪಿಸಿ ಒಳ್ಳೇ ಉಪಾಯವನ್ನು ಕಂಡುಕೊಂಡಿದ್ದೇವೆ ಅಂದುಕೊಳ್ಳುತ್ತಾರೆ; ಅವರ ಹೃದಯವೂ ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಅನ್ಯಾಯಗಳನ್ನು ಕಲ್ಪಿಸಿ, “ನಾವು ಒಳ್ಳೇ ಉಪಾಯವನ್ನು ಮಾಡಿದ್ದೇವೆ,” ಅಂದುಕೊಳ್ಳುತ್ತಾರೆ. ನಿಶ್ಚಯವಾಗಿ ಮಾನವರ ಆಂತರ್ಯವೂ ಹೃದಯವೂ ಕುಯುಕ್ತಿಯಿಂದ ಕೂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:6
16 ತಿಳಿವುಗಳ ಹೋಲಿಕೆ  

ಮಹಾಯಾಜಕರು ಮತ್ತು ಯೆಹೂದ್ಯರ ಸಮಿತಿಯವರು ಯೇಸುವಿಗೆ ಮರಣದಂಡನೆ ವಿಧಿಸಲು ಅಗತ್ಯವಾದ ಸುಳ್ಳುಸಾಕ್ಷಿಗಳನ್ನು ಹುಡುಕಿದರು.


ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.


ಬೇರೊಬ್ಬನ ಆಲೋಚನೆಗಳನ್ನು ನೋಡಲು ಸಾಧ್ಯವಿಲ್ಲ; ಅವು ಆಳವಾದ ನೀರಿನಂತಿವೆ; ಆದರೆ ಅವುಗಳನ್ನು ವಿವೇಕಿಯು ಅರ್ಥಮಾಡಿಕೊಳ್ಳಬಲ್ಲನು.


ಸುಳ್ಳುಸಾಕ್ಷಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು.


ಆದರೆ ನಾಬಾಲನು ಅವರನ್ನು ಕೀಳಾಗಿ ಕಂಡು, “ದಾವೀದನು ಯಾರು? ಈ ಇಷಯನ ಮಗನೆಂಬವನು ಯಾರು? ಇತ್ತೀಚಿನ ದಿನಗಳಲ್ಲಿ ತಮ್ಮ ಒಡೆಯರ ಹತ್ತಿರದಿಂದ ಓಡಿ ಹೋಗಿರುವ ಅನೇಕ ಗುಲಾಮರುಗಳಿದ್ದಾರೆ!


“‘ದಾವೀದನು ನಿನಗೆ ಕೇಡುಮಾಡಲು ಸಂಚುಗಳನ್ನು ಮಾಡುತ್ತಿದ್ದಾನೆ’ ಎಂಬುದಾಗಿ ಜನರು ಹೇಳುವಾಗ ನೀನು ಕೇಳುವುದೇಕೆ?


ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ. ಅವರೆಷ್ಟೇ ಭೂ ಆಸ್ತಿಯನ್ನು ಹೊಂದಿದ್ದರೂ ಅದರಿಂದೇನೂ ಪ್ರಯೋಜನವಿಲ್ಲ.


ಸೌಲನ ಅಧಿಕಾರಿಗಳೊಂದಿಗೆ ಎದೋಮ್ಯನಾದ ದೋಯೇಗನು ನಿಂತಿದ್ದನು. ದೋಯೇಗನು, “ನಾನು ನೋಬಿನಲ್ಲಿ ಇಷಯನ ಮಗನನ್ನು ನೋಡಿದೆನು. ದಾವೀದನು ಅಹೀಟೂಬನ ಮಗನಾದ ಅಹೀಮೆಲೆಕನನ್ನು ನೋಡಲು ಬಂದಿದ್ದನು.


ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.


ನನ್ನ ಕೂಗಿನಿಂದ ಭಯಗೊಂಡು ತನ್ನ ಮೇಲಂಗಿಯನ್ನೇ ಬಿಟ್ಟು ಓಡಿಹೋದ” ಎಂದು ಹೇಳಿದಳು.


ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು