Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 65:2 - ಪರಿಶುದ್ದ ಬೈಬಲ್‌

2 ಪ್ರಾರ್ಥನೆಯನ್ನು ಕೇಳುವಾತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರು ನಿನ್ನ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 65:2
23 ತಿಳಿವುಗಳ ಹೋಲಿಕೆ  

ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”


ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ.


ದೇವರು ನನ್ನ ಮೊರೆಯನ್ನು ಕೇಳಿದನು; ನನ್ನ ಪ್ರಾರ್ಥನೆಯನ್ನು ಆಲಿಸಿದನು.


ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು.


ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯೆಹೋವನೇ, ನೀನು ದೇವರೆಂಬುದನ್ನು ಈ ಜನರಿಗೆಲ್ಲ ತೋರಿಸು. ಈ ಜನರನ್ನೆಲ್ಲ ಮತ್ತೆ ನೀನು ನಿನ್ನ ಬಳಿಗೆ ತರುತ್ತಿರುವೆ ಎಂಬುದನ್ನೂ ಈ ಜನರು ತಿಳಿದುಕೊಳ್ಳಲಿ” ಎಂದು ಪ್ರಾರ್ಥಿಸಿದನು.


ಸರ್ವಭೂನಿವಾಸಿಗಳು ನಿನ್ನನ್ನು ಆರಾಧಿಸಲಿ. ಪ್ರತಿಯೊಬ್ಬರೂ ನಿನ್ನ ಹೆಸರನ್ನು ಕೀರ್ತಿಸಲಿ.


ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ನಾನು ಭೂಮಿಯಿಂದ ಮೇಲೆತ್ತಲ್ಪಡುವೆನು. ಆಗ ನಾನು ಎಲ್ಲಾ ಜನರನ್ನು ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.


ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.


ಆದ್ದರಿಂದ ನಾನು ನಿನ್ನ ಆಲಯಕ್ಕೆ ಬಂದು ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು ಜನರ ಮುಂದೆ ಆತನಿಗೆ ಸಲ್ಲಿಸುವೆನು.


ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು.


ವೈರಿಯು ನಿನ್ನ ಮೇಲೆ ಬರುವನು. ಆದ್ದರಿಂದ ನಿನ್ನ ಪಟ್ಟಣದ ಬುರುಜುಗಳನ್ನು ಕಾಯಿ. ಮಾರ್ಗದ ಮೇಲೆ ಕಣ್ಣಿಡು. ಯುದ್ಧಕ್ಕೆ ತಯಾರಾಗು. ರಣರಂಗಕ್ಕೆ ಹೋಗಲು ಸಿದ್ಧನಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು