Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 65:5 - ಪರಿಶುದ್ದ ಬೈಬಲ್‌

5 ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 65:5
28 ತಿಳಿವುಗಳ ಹೋಲಿಕೆ  

ಯೆಹೋವನನ್ನು ಮಾತ್ರ ನೀವು ಸ್ತುತಿಸಬೇಕು. ಆತನೇ ನಿಮ್ಮ ದೇವರು. ಆತನು ನಿಮಗಾಗಿ ಭಯಂಕರವಾದ ಮಹತ್ಕಾರ್ಯಗಳನ್ನು ಮಾಡಿದ್ದಾನೆ. ಅವುಗಳನ್ನು ನೀವು ಕಣ್ಣಾರೆ ಕಂಡಿದ್ದೀರಿ.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.


ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.


ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.


ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರುನೋಡುತ್ತಿದ್ದಾರೆ.


ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು: “ನೀನೇ ವರ್ತಮಾನ ಕಾಲದಲ್ಲಿರುವಾತನು. ನೀನೊಬ್ಬನೇ ಪರಿಶುದ್ಧನು. ನೀನು ನೀಡಿದ ಈ ತೀರ್ಪುಗಳಲ್ಲೆಲ್ಲಾ ನೀನು ನ್ಯಾಯವಂತನಾಗಿರುವೆ.


ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


“ಆಗ ನೀನು ನಿನ್ನ ಜನರನ್ನು ನೋಡುವೆ. ನಿನ್ನ ಮುಖವು ಸಂತೋಷದಿಂದ ಪ್ರಕಾಶಿಸುವದು. ಮೊದಲು ನೀನು ಭಯಪಡುವೆ. ಆ ಬಳಿಕ ನೀನು ಉತ್ಸಾಹಪಡುವೆ. ಸಮುದ್ರದಾಚೆ ಇರುವ ಐಶ್ವರ್ಯವು ನಿನ್ನ ಮುಂದೆ ರಾಶಿ ಹಾಕಲ್ಪಡುವದು. ಜನಾಂಗಗಳ ನಿಕ್ಷೇಪವು ನಿನಗೆ ದೊರೆಯುವುದು.


ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು.


ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು.


ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


ಕೆಲವರು ತಮ್ಮ ಉದ್ಯೋಗಗಳ ನಿಮಿತ್ತ ಸಮುದ್ರಯಾನ ಮಾಡಿದರು.


ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ.


ನಿನ್ನ ಶಕ್ತಿಯನ್ನೇ ಆಶ್ರಯಿಸಿಕೊಂಡು ಚೀಯೋನ್ ಪರ್ವತಕ್ಕೆ ಯಾತ್ರಿಕರಾಗಿ ಬರಲು ಬಯಸುವವರು ಎಷ್ಟೋ ಭಾಗ್ಯವಂತರು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವೆ.” ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು