Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:3 - ಪರಿಶುದ್ದ ಬೈಬಲ್‌

3 ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:3
19 ತಿಳಿವುಗಳ ಹೋಲಿಕೆ  

ಅವರು ನನ್ನ ಕುರಿತಾಗಿ ಕೇಳಿದ ಕೂಡಲೇ ವಿಧೇಯರಾಗುವರು. ಆ ವಿದೇಶಿಯರು ನನ್ನ ವಿಷಯದಲ್ಲಿ ಭಯದಿಂದಿರುವರು.


ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.


ಯೆಹೋವನ ಶತ್ರುಗಳು ಭಯದಿಂದ ನಡುಗುವರು. ಅವರು ಶಾಶ್ವತವಾಗಿ ದಂಡಿಸಲ್ಪಡುವರು.


ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು.


ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ. ಪರ್ವತಗಳು ನಿನ್ನೆದುರು ಕರಗಿಹೋದರೂ


ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು.


ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು.


ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…”


“ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು.


ಆ ವಿದೇಶಿಯರು ಧೈರ್ಯವಿಲ್ಲದವರಾಗಿ ನಡುಗುತ್ತಾ ತಮ್ಮ ಕೋಟೆಗಳಿಂದ ಬರುವರು.


ಬಲಾಢ್ಯ ದೇಶಗಳ ಜನರು ನಿನ್ನನ್ನು ಸನ್ಮಾನಿಸುವರು. ಬಲಿಷ್ಠ ನಗರಗಳ ಬಲಶಾಲಿಗಳು ನಿನಗೆ ಭಯಪಡುವರು.


ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು