Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:4 - ಪರಿಶುದ್ದ ಬೈಬಲ್‌

4 ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:4
19 ತಿಳಿವುಗಳ ಹೋಲಿಕೆ  

“ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿಮ್ಮ ಸಹಾಯಕ್ಕೆ ಬರುವನು.


ಸರ್ವಭೂನಿವಾಸಿಗಳು ನಿನ್ನನ್ನು ಆರಾಧಿಸಲಿ. ಪ್ರತಿಯೊಬ್ಬರೂ ನಿನ್ನ ಹೆಸರನ್ನು ಕೀರ್ತಿಸಲಿ.


ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ.


ದೇವರಿಗೆ ಗಾಯನ ಮಾಡಿರಿ! ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. ಆತನ ಗರ್ಜನೆಗೆ ಕಿವಿಗೊಡಿರಿ!


ಆತನ ಹೆಸರಿನ ಮಹಿಮೆಯನ್ನು ಕೀರ್ತಿಸಿರಿ. ಸ್ತುತಿಗೀತೆಗಳಿಂದ ಆತನನ್ನು ಸನ್ಮಾನಿಸಿರಿ.


ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.


ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.


ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.


“ನಾನು ಯೆಹೋವನೇ. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕಾಣಿಸಿಕೊಂಡೆನು. ಅವರು ನನ್ನನ್ನು ‘ಎಲ್ ಶದ್ದಾಯ್’ (ಸರ್ವಶಕ್ತನಾದ ದೇವರು) ಎಂದು ಕರೆದರು. ಆದರೆ ನಾನು ನನ್ನನ್ನು ಯೆಹೋವ ಎಂಬ ನನ್ನ ಹೆಸರಿನಲ್ಲಿ ಅವರಿಗೆ ಗೊತ್ತುಪಡಿಸಿಕೊಳ್ಳಲಿಲ್ಲ.


ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು.


ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ಯೆಹೋವನೇ, ನೀನು ನೀತಿವಂತರಿಗೆ ಒಳ್ಳೆಯದನ್ನೇ ಮಾಡುವೆ; ನೀನು ಅವರನ್ನು ವಿಶಾಲವಾದ ಗುರಾಣಿಯಂತೆ ಸಂರಕ್ಷಿಸುವೆ.


ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.


ನೀತಿವಂತರಿಗೋಸ್ಕರ ಬೆಳಕೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಪ್ರಕಾಶಿಸುತ್ತವೆ.


ಒಳ್ಳೆಯವರ ನಿರೀಕ್ಷೆಗೆ ಸಂತೋಷವೇ ಫಲಿತಾಂಶ. ಕೆಟ್ಟವರ ನಿರೀಕ್ಷೆಗೆ ಶೂನ್ಯವೇ ಫಲಿತಾಂಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು