Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:13 - ಪರಿಶುದ್ದ ಬೈಬಲ್‌

13 ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ; ನಿನ್ನ ಕೃಪೆಗೆ ತಕ್ಕಕಾಲ ಇದೇ. ದೇವರೇ, ನಿನ್ನ ಮಹಾಪ್ರೀತಿಯಿಂದಲೂ ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯಸಂಧನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ. ಇದು ನಿಮ್ಮ ಮೆಚ್ಚಿಕೆಯ ಸಕಾಲ. ಓ ದೇವರೇ, ನಿಮ್ಮ ಮಹಾಪ್ರೀತಿಯಿಂದ ನನಗೆ ನಿಮ್ಮ ನಿಶ್ಚಯ ರಕ್ಷಣೆಯನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:13
24 ತಿಳಿವುಗಳ ಹೋಲಿಕೆ  

ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.”


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ನಿನ್ನ ಸೇವಕರನ್ನು ಕೇಳು, ಇದು ನಿಜವೆಂಬುದನ್ನು ಅವರು ನಿನಗೆ ತಿಳಿಸುತ್ತಾರೆ. ನನ್ನ ಯುವಕರ ಬಗ್ಗೆ ದಯವಿಟ್ಟು ದಯಾಳುವಾಗಿರು. ಈ ಶುಭಸಂದರ್ಭದಲ್ಲಿ ನಾವು ನಿಮ್ಮ ಹತ್ತಿರಕ್ಕೆ ಬರುತ್ತೇವೆ. ಸ್ನೇಹಿತನಾದ ದಾವೀದನಿಗಾಗಿ ನಿನಗೆ ಸಾಧ್ಯವಿದ್ದಷ್ಟನ್ನು ದಯವಿಟ್ಟು ಈ ಯುವಕರಿಗೆ ಕೊಡು” ಎಂದು ಹೇಳಿ ಕಳುಹಿಸಿದನು.


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಆದ್ದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.


ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.


ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.


ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.


ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.


ಈ ಔತಣ ಸಮಾರಂಭದ ಎರಡನೆಯ ದಿನದಂದು ಅವರಿಬ್ಬರೂ ದ್ರಾಕ್ಷಾರಸ ಸೇವನೆ ಮಾಡುತ್ತಿರುವಾಗ ತಿರಿಗಿ ರಾಜನು ತನ್ನ ರಾಣಿಯನ್ನು ಪ್ರಶ್ನಿಸಿದನು, “ಎಸ್ತೇರ್ ರಾಣಿಯೇ, ನಿನಗೆ ಬೇಕಾದದ್ದನ್ನು ಕೇಳಿಕೊ. ನಾನು ಕೊಡುವೆನು; ಅರ್ಧ ರಾಜ್ಯ ಬೇಕಾದರೂ ನಾನು ಕೊಡುತ್ತೇನೆ” ಎಂದನು.


ಅವರು ದ್ರಾಕ್ಷಾರಸವನ್ನು ಸೇವಿಸುತ್ತಿರುವಾಗ ರಾಜನು ಎಸ್ತೇರಳನ್ನು ತಿರಿಗಿ ವಿಚಾರಿಸಿದನು, “ನೀನು ನನ್ನನ್ನು ಏನು ಕೇಳಬೇಕೆಂದಿದ್ದೀ? ಏನೂ ಬೇಕಾದರೂ ಕೇಳು. ನಾನು ಕೊಡುತ್ತೇನೆ. ಹೇಳು ಏನುಬೇಕು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಾನು ಕೊಡುತ್ತೇನೆ” ಅಂದನು.


ಅರಸನು ಒಳಾಂಗಣದಲ್ಲಿ ನಿಂತಿದ್ದ ಎಸ್ತೇರಳನ್ನು ಕಂಡ ಕೂಡಲೇ ಆಕೆಯನ್ನು ಮೆಚ್ಚಿಕೊಂಡು ತನ್ನ ಕೈಯಲ್ಲಿದ್ದ ರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಆಗ ಎಸ್ತೇರಳು ಒಳಾಂಗಣವನ್ನು ಪ್ರವೇಶಿಸಿ ರಾಜನ ಬಳಿ ಹೋದಳು ಮತ್ತು ರಾಜದಂಡದ ತುದಿಯನ್ನು ತನ್ನ ಬೆರಳಿನಿಂದ ಮುಟ್ಟಿದಳು.


ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.


ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.


ಯೆಹೋವನೇ, ನೋಡು! ಅವರು ಕುಳಿತುಕೊಂಡಿರುವಾಗಲೂ ನಿಂತುಕೊಂಡಿರುವಾಗಲೂ ನನ್ನನ್ನು ಹೇಗೆ ಗೇಲಿ ಮಾಡುತ್ತಾರೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು