Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:21 - ಪರಿಶುದ್ದ ಬೈಬಲ್‌

21 ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನಗೆ ಉಣ್ಣುವದಕ್ಕೆ ಕಹಿಯಾದ ವಸ್ತುವನ್ನೂ ಬಾಯಾರಿದಾಗ ಹುಳಿತ ದ್ರಾಕ್ಷಾರಸವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನ ಆಹಾರಕ್ಕಾಗಿ ಕಹಿಯಾದದ್ದನ್ನು ಕೊಟ್ಟರು. ನನ್ನ ದಾಹಕ್ಕಾಗಿ ನನಗೆ ಹುಳಿರಸವನ್ನು ಕುಡಿಯಲು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:21
13 ತಿಳಿವುಗಳ ಹೋಲಿಕೆ  

ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.


ಸೈನಿಕರೂ ಯೇಸುವನ್ನು ಗೇಲಿಮಾಡಿದರು. ಅವರು ಯೇಸುವಿನ ಬಳಿಗೆ ಬಂದು, ಸ್ವಲ್ಪ ಹುಳಿದ್ರಾಕ್ಷಾರಸವನ್ನು ನೀಡಿ,


ಗೊಲ್ಗೊಥದಲ್ಲಿ ಸೈನಿಕರು ಯೇಸುವಿಗೆ ರಕ್ತಬೋಳ ಮಿಶ್ರಿತವಾದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ಕುಡಿಯಲಿಲ್ಲ.


ಆ ಜನರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು, ಅದರಲ್ಲಿ ಹುಳಿರಸವನ್ನು ತುಂಬಿಸಿ, ಅದನ್ನು ಒಂದು ಕೋಲಿಗೆ ಕಟ್ಟಿ ಆ ಕೋಲಿನಿಂದ ಸ್ಪಂಜನ್ನು ಯೇಸುವಿಗೆ ಕುಡಿಯಲು ಕೊಟ್ಟನು.


ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, “ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.


ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: “ಯೆಹೂದದ ಜನರು ಕಹಿಯಾದ ಆಹಾರವನ್ನು ತಿನ್ನುವಂತೆ ನಾನು ಬೇಗನೆ ಮಾಡುವೆನು; ಅವರು ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು.


“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.


ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.


ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


ರಾತ್ರಿಯಲ್ಲಿ ಅವಳು ಬಿಕ್ಕಿಬಿಕ್ಕಿ ಅಳುತ್ತಾಳೆ. ಅವಳ ಕೆನ್ನೆಗಳ ಮೇಲೆ ಕಣ್ಣೀರು ಹರಿಯುತ್ತಿದೆ. ಅವಳನ್ನು ಸಂತೈಸುವವರು ಯಾರೂ ಇಲ್ಲ. ಅವಳ ಮಿತ್ರ ರಾಷ್ಟ್ರಗಳಲ್ಲಿ ಒಂದೂ ಕೂಡ ಅವಳನ್ನು ಸಂತೈಸುವುದಿಲ್ಲ. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ಶತ್ರುಗಳಾದರು.


ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು