Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:26 - ಪರಿಶುದ್ದ ಬೈಬಲ್‌

26 ಅವರನ್ನು ದಂಡಿಸು. ಆಗ ಅವರು ಓಡಿಹೋಗುವರು. ಅಲ್ಲದೆ ಅವರಿಗಾದ ನೋವುಗಳು, ಗಾಯಗಳು ಅವರ ಆಡಿಕೆಗೆ ಕಾರಣವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಆಡಿಕೆಗೆ ಕಾರಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀವು ಗಾಯಮಾಡಿದ ನನ್ನನ್ನು ಹಿಂಸಿಸುತ್ತಾರೆ. ನೀವು ನೋಯಿಸಿದ ನನ್ನನ್ನು ಕುರಿತು ಚುಚ್ಚಿಮಾತನಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:26
10 ತಿಳಿವುಗಳ ಹೋಲಿಕೆ  

ಆದರೆ ಆತನು ನಮ್ಮ ಸಂಕಷ್ಟಗಳನ್ನು ತನ್ನ ಮೇಲೆ ಹೊತ್ತುಕೊಂಡನು. ನಮ್ಮ ಬೇನೆಯನ್ನು ಆತನು ಅನುಭವಿಸಿದನು. ದೇವರು ಆತನನ್ನು ಶಿಕ್ಷಿಸಿದ್ದಾನೆ ಎಂದು ನಾವು ನೆನಸಿದೆವು. ಆತನು ಏನೋ ಮಾಡಿದ್ದಕ್ಕಾಗಿ ದೇವರು ಆತನಿಗೆ ಹೊಡೆದನೆಂದು ಭಾವಿಸಿಕೊಂಡೆವು.


ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”


ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


ಆ ಯೆಹೂದ್ಯರು ಪ್ರಭುವಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದುಹಾಕಿದರು. ತಮ್ಮ ದೇಶದಿಂದ (ಜುದೇಯ) ನಮ್ಮನ್ನು ಬಲವಂತವಾಗಿ ಹೊರಗಟ್ಟಿದರು. ಅವರು ದೇವರಿಗೆ ಮೆಚ್ಚಿಕೆಯಾದವರಾಗಿಲ್ಲ ಮತ್ತು ಜನರೆಲ್ಲರ ವಿರುದ್ಧವಾಗಿದ್ದಾರೆ.


ಯಾಕೆಂದರೆ, ಆ ದುಷ್ಟನು ಯಾವ ಒಳ್ಳೆಯದನ್ನೂ ಮಾಡಲಿಲ್ಲ; ಯಾರನ್ನೂ ಪ್ರೀತಿಸಲಿಲ್ಲ. ಅವನು ಬಡಜನರಿಗೂ ಮತ್ತು ಅಸಹಾಯಕರಿಗೂ ಜೀವನವನ್ನು ಕಷ್ಟಕರವನ್ನಾಗಿ ಮಾಡಿದನು.


ನಾನು ತಪ್ಪಿಸಿಕೊಂಡು ಹೋಗುವ ದಾರಿಯನ್ನು ಆ ಯೌವನಸ್ಥರು ಕಾಯುತ್ತಿದ್ದಾರೆ. ನನ್ನನ್ನು ನಾಶಮಾಡುವುದರಲ್ಲಿ ಅವರು ಯಶಸ್ವಿಯಾಗುವರು. ಅವರಿಗೆ ವಿರುದ್ಧವಾಗಿ ನನಗೆ ಸಹಾಯಮಾಡಲು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು