Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:6 - ಪರಿಶುದ್ದ ಬೈಬಲ್‌

6 ಸೇನಾಧೀಶ್ವರನಾದ ನನ್ನ ಯೆಹೋವನೇ, ನಿನ್ನ ಹಿಂಬಾಲಕರಿಗೆ ನನ್ನಿಂದ ನಾಚಿಕೆಯಾಗದಿರಲಿ. ಇಸ್ರೇಲರ ದೇವರೇ, ನಿನ್ನ ಆರಾಧಕರಿಗೆ ನನ್ನಿಂದ ಅವಮಾನವಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರಭು ಸೇನಾಧೀಶ್ವರಾ, I ನನ್ನಿಂದ ನಿರಾಶೆಯಾಗದಿರಲಿ, ನಿನ್ನ ನಂಬಿದವರಿಗೆ II ಇಸ್ರಯೇಲರ ದೇವಾ I ನನ್ನಿಂದ ನಿಂದೆಯಾಗದಿರಲಿ ನಿನ್ನ ದರ್ಶನಾರ್ಥಿಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲ್ಯರ ದೇವರೇ, ನಿನ್ನ ದರ್ಶನಾರ್ಥಿಗಳು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿಮ್ನನ್ನು ಹುಡುಕುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:6
10 ತಿಳಿವುಗಳ ಹೋಲಿಕೆ  

ನಿನ್ನಲ್ಲಿ ಭರವಸವಿಟ್ಟಿರುವವರು ನಿರಾಶರಾಗುವುದಿಲ್ಲ ದ್ರೋಹಿಗಳಾದರೋ ನಿರಾಶರಾಗುವರು. ಅವರಿಗೆ ಏನೂ ದೊರೆಯುವುದಿಲ್ಲ.


ಜನಾಂಗಗಳನ್ನು ನಿನ್ನ ಸುತ್ತಲೂ ಸೇರಿಸಿ ನಿನ್ನ ಉನ್ನತಸ್ಥಾನದಲ್ಲಿ ಆಸೀನನಾಗು.


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು!


ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.


ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. ‘ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು


“ದೇವರು ತನ್ನ ವಾಗ್ದಾನಕ್ಕನುಸಾರವಾಗಿ ದಾವೀದನ ಸಂತಾನದವರಲ್ಲಿ ಒಬ್ಬನನ್ನು ಇಸ್ರೇಲರ ರಕ್ಷಕನನ್ನಾಗಿ ಕಳುಹಿಸಿ ಕೊಟ್ಟಿದ್ದಾನೆ. ಆತನೇ ಯೇಸು.


ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು.


ಅವರು ಪೇತ್ರ ಯೋಹಾನರನ್ನು ಅಲ್ಲಿದ್ದ ಎಲ್ಲಾ ಜನರ ಮುಂದೆ ನಿಲ್ಲಿಸಿದರು. ಯೆಹೂದ್ಯನಾಯಕರು ಅವರನ್ನು “ನೀವು ಈ ಕುಂಟನನ್ನು ಹೇಗೆ ಗುಣಪಡಿಸಿದಿರಿ? ನೀವು ಯಾವ ಶಕ್ತಿಯನ್ನು ಉಪಯೋಗಿಸಿದಿರಿ? ಇದನ್ನು ಯಾರ ಅಧಿಕಾರದಿಂದ ಮಾಡಿದಿರಿ?” ಎಂದು ಅನೇಕ ಸಲ ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು