Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:17 - ಪರಿಶುದ್ದ ಬೈಬಲ್‌

17 ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ ನಾನು ಆತನನ್ನು ಕೊಂಡಾಡುವೆನು. ಪರಾತ್ಪರದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:17
19 ತಿಳಿವುಗಳ ಹೋಲಿಕೆ  

ದೇವರೇ, ನಿನ್ನಲ್ಲಿ ನಾನು ಸಂತೋಷಿಸುತ್ತಾ ಉಲ್ಲಾಸಪಡುವೆನು. ಮಹೋನ್ನತನೇ, ನಿನ್ನ ಹೆಸರನ್ನೇ ಸಂಕೀರ್ತಿಸುವೆನು.


ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ.


ಆತನು ಮಹತ್ವವಾದ ಮತ್ತು ಅದ್ಭುತವಾದ ಕಾರ್ಯಗಳನ್ನು ಮಾಡುವನು. ಆತನ ನೀತಿಯು ಶಾಶ್ವತವಾದದ್ದು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.


ಯೆಹೋವನೇ, ನೀನಾದರೋ ಸದಾಕಾಲ ಸನ್ಮಾನ ಹೊಂದುವೆ.


ನಿನ್ನ ನೀತಿಯ ಕುರಿತು ನಾನು ಜನರಿಗೆ ಹೇಳುವೆನು; ಪ್ರತಿದಿನವೂ ನಿನ್ನನ್ನು ಸ್ತುತಿಸುವೆನು.


“ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:


ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು!


ನಿನ್ನ ಒಳ್ಳೆಯ ಕಾರ್ಯಗಳ ಕುರಿತಾಗಿ ಜನರು ಹೇಳುವರು. ನಿನ್ನ ನೀತಿಯು ಕುರಿತಾಗಿ ಜನರು ಹಾಡುವರು.


ಯೆಹೋವನೇ, ನಿನ್ನನ್ನು ಸ್ತುತಿಸುವುದೂ ಮಹೋನ್ನತನಾದ ದೇವರೇ, ನಿನ್ನ ಹೆಸರನ್ನು ಕೊಂಡಾಡುವುದೂ ಯುಕ್ತವಾಗಿದೆ.


ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.


“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾಮನು ನುಡಿದಂತೆಯೇ ಆಯಿತು.


ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.


ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.


ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.


ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು