Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:4 - ಪರಿಶುದ್ದ ಬೈಬಲ್‌

4 ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ವಿುತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡುಮಾಡಿದ್ದರೆ, ಕಾರಣವಿಲ್ಲದೆ ನನ್ನ ವೈರಿಯಿಂದ ಏನನ್ನಾದರೂ ಸುಲಿದುಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:4
20 ತಿಳಿವುಗಳ ಹೋಲಿಕೆ  

ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು; ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು.


ದಾವೀದನು ತನ್ನ ಜನರನ್ನು ತಡೆಯಲು ಈ ಮಾತುಗಳನ್ನು ಹೇಳಿದನು. ಸೌಲನನ್ನು ಆಕ್ರಮಿಸಲು ದಾವೀದನು ತನ್ನ ಜನರಿಗೆ ಅವಕಾಶ ಕೊಡಲಿಲ್ಲ. ಸೌಲನು ಗವಿಯನ್ನು ಬಿಟ್ಟು ತನ್ನ ದಾರಿಯಲ್ಲಿ ಹೊರಟನು.


ಜನರು ಬೆಳ್ಳಿಬಂಗಾರವನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ.


ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು.


ನಿನ್ನ ಜೀವವು ನನಗೆ ಮುಖ್ಯವೆಂಬುದನ್ನು ಈ ದಿನ ನಾನು ನಿನಗೆ ತೋರಿಸಿದೆ! ಇದೇ ರೀತಿ, ನನ್ನ ಜೀವವು ತನಗೆ ಮುಖ್ಯವೆಂಬುದನ್ನು ಯೆಹೋವನು ತೋರಿಸುತ್ತಾನೆ! ಯೆಹೋವನು ನನ್ನನ್ನು ಎಲ್ಲಾ ಕೇಡುಗಳಿಂದಲೂ ರಕ್ಷಿಸುತ್ತಾನೆ” ಎಂದು ಹೇಳಿದನು.


ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ.


ದಾವೀದನು ರಾಮದ ಪಾಳೆಯದಿಂದ ಓಡಿಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು.


ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ?


ನಂತರ ಸೌಲನು, “ನಾನು ಪಾಪಮಾಡಿದ್ದೇನೆ. ನನ್ನ ಮಗನಾದ ದಾವೀದನೇ, ಹಿಂದಿರುಗಿ ಬಾ. ನನ್ನ ಜೀವವು ನಿನಗೆ ಮುಖ್ಯವೆಂಬುದನ್ನು ನನಗೆ ನೀನು ಈ ದಿನ ತೋರಿಸಿರುವೆ. ಆದ್ದರಿಂದ ನಾನು ನಿನ್ನನ್ನು ಹಿಂಸಿಸಲು ಪ್ರಯತ್ನಿಸುವುದಿಲ್ಲ. ನಾನು ಮೂರ್ಖನಂತೆ ವರ್ತಿಸಿದೆ. ನಾನು ದೊಡ್ಡ ತಪ್ಪನ್ನು ಮಾಡಿದ್ದೇನೆ” ಎಂದನು.


ನೀನು ಬೆಳ್ಳಿಯ ಬಟ್ಟಲನ್ನು ನಮ್ಮ ಯಾರ ಚೀಲಗಳಲ್ಲಿ ಕಂಡರೂ, ಆ ವ್ಯಕ್ತಿಯು ಸಾಯಲಿ, ನೀನು ಅವನನ್ನು ಕೊಲ್ಲಬಹುದು; ನಾವು ನಿನ್ನ ಗುಲಾಮರಾಗಿರುವೆವು” ಎಂದು ಹೇಳಿದರು.


ಯೆಹೋವನು ನಿನ್ನನ್ನು ದಂಡಿಸುತ್ತಿದ್ದಾನೆ. ಏಕೆಂದರೆ ನೀನು ಸೌಲನ ಕುಟುಂಬದವರನ್ನು ಕೊಂದು ಸೌಲನ ರಾಜಪದವಿಯನ್ನು ಕದ್ದಿರುವೆ. ಈಗ ನಿನಗೂ ಅದೇ ಸಂಭವಿಸುತ್ತಿದೆ. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಮಗನಿಗೆ ಕೊಟ್ಟಿದ್ದಾನೆ. ಏಕೆಂದರೆ ನೀನೊಬ್ಬ ಕೊಲೆಗಾರ” ಎಂದನು.


ನಾನು ನೀತಿಮಾರ್ಗವನ್ನು ಬಿಟ್ಟುಹೋಗಿದ್ದರೆ, ನನ್ನ ಕಣ್ಣುಗಳು ನನ್ನ ಹೃದಯವನ್ನು ಕೆಟ್ಟದ್ದಕ್ಕೆ ನಡೆಸಿದ್ದರೆ, ನನ್ನ ಕೈಗಳು ಪಾಪದಿಂದ ಕೊಳಕಾಗಿದ್ದರೆ,


ನಾನು ಹಾಗೆ ಮಾಡಿದ್ದರೆ, ನನ್ನ ತೋಳು ಕೀಲುತಪ್ಪಿ ಭುಜದಿಂದ ಮುರಿದುಬೀಳಲಿ.


ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು