Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:5 - ಪರಿಶುದ್ದ ಬೈಬಲ್‌

5 ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎನ್ನ ಬೆನ್ನಟ್ಟಿ ಬರಲಿ ವೈರಿ, ಕಾಲಿಂದೆನ್ನ ಮೆಟ್ಟಿ ತುಳಿಯಲಿ I ಎನ್ನ ಮಾನವನು ಮಣ್ಣುಪಾಲಾಗಿಸಲಿ, ನನ್ನನು ಸೋಲಿಸಿಬಿಡಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣವೈರಿಯನ್ನೂ ರಕ್ಷಿಸಿದೆನಲ್ಲಾ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನನ್ನ ವೈರಿಯು ಬೆನ್ನಟ್ಟಿ ನನ್ನನ್ನು ಹಿಡಿದುಕೊಳ್ಳಲಿ. ನನ್ನ ಜೀವವನ್ನು ನೆಲಕ್ಕೆ ಹಾಕಿ ತುಳಿದು ಬಿಡಲಿ ಮತ್ತು ನನ್ನ ಮಾನವನ್ನು ಮಣ್ಣು ಪಾಲಾಗುವಂತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:5
17 ತಿಳಿವುಗಳ ಹೋಲಿಕೆ  

ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು.


ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.


ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಬಹಳ ಮೊಟಕಾಗುತ್ತದೆ.


ಅವನ ಉತ್ತರ: “ದ್ರಾಕ್ಷಿತೊಟ್ಟಿಯಲ್ಲಿ ನಾನೊಬ್ಬನೇ ತುಳಿದೆನು. ಯಾರೂ ನನಗೆ ಸಹಾಯ ಮಾಡಲಿಲ್ಲ. ನಾನು ಕೋಪಗೊಂಡು ದ್ರಾಕ್ಷಿಹಣ್ಣಿನ ಮೇಲೆ ತುಳಿದೆನು. ಅದರ ರಸ ನನ್ನ ಬಟ್ಟೆಯ ಮೇಲೆ ಹಾರಿತು. ಆದ್ದರಿಂದ ನನ್ನ ಬಟ್ಟೆಗಳು ಮಲಿನವಾದವು.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ದೇವರೊಬ್ಬನೇ ನಮ್ಮನ್ನು ಬಲಗೊಳಿಸಬಲ್ಲನು. ಆತನೊಬ್ಬನೇ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು!


ಜನರು ಐಶ್ವರ್ಯವಂತರಾಗಿದ್ದರೂ ಭೂಲೋಕದಲ್ಲಿ ಶಾಶ್ವತವಾಗಿ ಇರಲಾಗದು. ಎಲ್ಲರೂ ಪ್ರಾಣಿಗಳಂತೆಯೇ ಸಾಯುವರು.


ನಿನ್ನ ಸಹಾಯದಿಂದಲೇ ನಮ್ಮ ಶತ್ರುಗಳನ್ನು ಹಿಂದಟ್ಟುವೆವು. ನಿನ್ನ ಹೆಸರಿನಿಂದ, ನಮ್ಮ ಶತ್ರುಗಳ ಮೇಲೆ ನಡೆದಾಡುವೆವು.


ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.


“ನಾನು ಬಹು ದುಃಖಿತನಾಗಿದ್ದೇನೆ; ಗೋಣಿತಟ್ಟನ್ನು ಸುತ್ತಿಕೊಂಡಿದ್ದೇನೆ; ಸೋತುಹೋದೆನೆಂದು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಂಡಿದ್ದೇನೆ.


ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.


ನೀನು ನನಗೆ ಮಾಡಿದ ಒಳ್ಳೆಯ ಕಾರ್ಯಗಳ ಬಗ್ಗೆ ನನಗೆ ತಿಳಿಸಿರುವೆ. ಯೆಹೋವನು ನನ್ನನ್ನು ನಿನ್ನ ಬಳಿಗೆ ಕರೆದು ತಂದನು, ಆದರೆ ನೀನು ನನ್ನನ್ನು ಕೊಲ್ಲಲಿಲ್ಲ.


ನೀನು ನೂತನ ರಾಜನಾಗುವೆಯೆಂಬುದು ನನಗೆ ತಿಳಿದಿದೆ. ಇಸ್ರೇಲ್ ರಾಜ್ಯವನ್ನು ನೀನು ಆಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು