Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:21 - ಪರಿಶುದ್ದ ಬೈಬಲ್‌

21 ನೀನು ನನ್ನ ಘನತೆಯನ್ನು ಮೊದಲಿಗಿಂತಲೂ ಹೆಚ್ಚಿಸುವೆ. ನೀನೇ ನನ್ನನ್ನು ಸಂತೈಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ಗೌರವವನು ಅಧಿಕರಿಸಯ್ಯಾ I ಮರಳಿ ನೆಮ್ಮದಿಯನು ಪಾಲಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ನನ್ನ ಗೌರವವನ್ನು ಹೆಚ್ಚಿಸಿ ನನ್ನನ್ನು ಮತ್ತೊಮ್ಮೆ ಆದರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:21
16 ತಿಳಿವುಗಳ ಹೋಲಿಕೆ  

ಸೌಲನ ವಂಶದವರ ಮತ್ತು ದಾವೀದನ ವಂಶದವರ ಮಧ್ಯೆ ಬಹಳ ಕಾಲದವರೆಗೆ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಲೇ ಇದ್ದನು. ಸೌಲನ ವಂಶವು ದುರ್ಬಲಗೊಳ್ಳುತ್ತಲೇ ಇದ್ದಿತು.


ಯೆಹೋವನೇ, ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. ನನ್ನ ಶತ್ರುಗಳು ಆ ಸೂಚನೆಯನ್ನು ಕಂಡು ನಿರಾಶರಾಗುವರು. ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಅದು ತೋರಿಸುತ್ತದೆ.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ.


ದೇವರಿಗೆ ಸ್ತೋತ್ರವಾಗಲಿ. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಯಾವಾಗಲೂ ವಿಜಯೋತ್ಸವದತ್ತ ನಡೆಸುತ್ತಿದ್ದಾನೆ. ದೇವರು ತನ್ನ ಜ್ಞಾನವೆಂಬ ಪರಿಮಳವನ್ನು ಎಲ್ಲಾ ಕಡೆಗಳಲ್ಲಿಯೂ ಹರಡಲು ನಮ್ಮನ್ನು ಉಪಯೋಗಿಸುತ್ತಿದ್ದಾನೆ.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.


ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಆವರಿಸಿಕೊಳ್ಳುವುದು.


ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ. ನಿನ್ನ ಬಲಗೈ ನನಗೆ ಆಧಾರ ನೀಡುತ್ತದೆ. ನೀನು ನನ್ನನ್ನು ಪದೇಪದೇ ಬಲಗೊಳಿಸಿರುವೆ.


ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ನಿಮ್ಮ ನಿಮಿತ್ತದಿಂದ ದೇವರ ಸನ್ನಿಧಿಯಲ್ಲಿ ಬಹಳ ಹರ್ಷಿತರಾಗಿದ್ದೇವೆ! ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನಮಗಿರುವ ಆನಂದಕ್ಕೆ ಸರಿಸಮವಾಗಿ ಕೃತಜ್ಞತಾಸ್ತುತಿ ಸಲ್ಲಿಸಲು ನಮಗೆ ಹೇಗೆ ಸಾಧ್ಯವಾದೀತು?


ಆದ್ದರಿಂದಲೇ ನಮಗೆ ಆದರಣೆಯಾಯಿತು. ತೀತನು ಬಹು ಸಂತೋಷವಾಗಿರುವುದನ್ನು ಕಂಡು ನಮಗೆ ಮತ್ತಷ್ಟು ಸಂತೋಷವಾಯಿತು. ನೀವೆಲ್ಲರೂ ಅವನನ್ನು ಸಂತೋಷಗೊಳಿಸಿದಿರಿ.


ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು