Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:1 - ಪರಿಶುದ್ದ ಬೈಬಲ್‌

1 ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪುನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ I ಕಲಿಸು ನಿನ್ನ ನೀತಿಯನು ರಾಜಕುವರನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು ಕಲಿಸಿಕೊಡು; ರಾಜಕುಮಾರನಾದ ಅವನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:1
14 ತಿಳಿವುಗಳ ಹೋಲಿಕೆ  

ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು.


ಈ ಜನರನ್ನು ಸರಿಯಾದ ರೀತಿಯಲ್ಲಿ ಆಳುವ ಹಾಗೆ ನನಗೆ ಜ್ಞಾನವನ್ನೂ ವಿವೇಕವನ್ನೂ ದಯಪಾಲಿಸು. ನಿನ್ನ ಸಹಾಯವಿಲ್ಲದೆ ಈ ನಿನ್ನ ಜನರನ್ನು ಆಳಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದನು.


ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”


ಯಾಜಕನಾದ ಚಾದೋಕನು ಪವಿತ್ರಗುಡಾರದಿಂದ ಎಣ್ಣೆಯನ್ನು ತೆಗೆದುಕೊಂಡು ಬಂದನು. ಸೊಲೊಮೋನನು ರಾಜನೆಂದು ತೋರಿಸಲು ಅವನ ತಲೆಯ ಮೇಲೆ ಚಾದೋಕನು ಎಣ್ಣೆಯನ್ನು ಸುರಿದನು. ದಾವೀದನ ಜನರು ತುತ್ತೂರಿಯನ್ನು ಊದಿದರು. ಆಗ ಎಲ್ಲಾ ಜನರೂ, “ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. ‘ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು


ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.


ಇಸ್ರೇಲರೆಲ್ಲರಿಗೆ ಅರಸನಾಗಿದ್ದ ದಾವೀದನು ಪಕ್ಷಪಾತವಿಲ್ಲದೆ ನ್ಯಾಯತೀರಿಸುತ್ತಿದ್ದನು.


ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು