Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:16 - ಪರಿಶುದ್ದ ಬೈಬಲ್‌

16 ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ. ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ. ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. ಬಯಲುಗಳು ಹುಲ್ಲಿನಿಂದ ಆವೃತಿಯಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಮೃದ್ಧಿಯಾಗಲಿ ನಾಡಿನ ದವಸಧಾನ್ಯ ನೆಲಮಲೆಗಳ ಮೇಲೆ I ಸೊಂಪಾಗಲಿ ಅದರ ಹಣ್ಣುಹಂಪಲು ಲೆಬನೋನಿನ ಮರಗಳಂತೆ I ಹುಲುಸಾಗಲಿ ನಗರ ನಿವಾಸಿಗಳ ಸಂಖ್ಯೆ ಬಯಲಿನ ಹುಲ್ಲಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯವರೆಗೂ ಇರಲಿ; ಅದರ ಫಲವು ಲೆಬನೋನಿನ ಹಾಗೆ ಸಮೃದ್ಧಿಯಾಗಲಿ; ಪಟ್ಟಣದವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:16
23 ತಿಳಿವುಗಳ ಹೋಲಿಕೆ  

ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು.


ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”


ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.


ನಿಮ್ಮಲ್ಲಿ ಕೆಲವರು ಪ್ರತಿಯೊಂದು ನೀರಿನ ತೊರೆಗಳ ಬಳಿಯಲ್ಲಿ ಬೀಜ ಬಿತ್ತುವರು. ಅದರ ಸುತ್ತಲೂ ಹೋಗಿ ಯಾವ ಆತಂಕವಿಲ್ಲದೆ ತಿನ್ನಲು ನೀವು ನಿಮ್ಮ ಪಶುಗಳನ್ನು ಬಿಡುವಿರಿ; ಸಂತಸದಿಂದ ಇರುವಿರಿ.


ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು.


ಆ ಸಮಯದಲ್ಲಿ ಯೆಹೋವನು ನಿಮಗಾಗಿ ಮಳೆ ಸುರಿಸುವನು. ನೀವು ಭೂಮಿಯಲ್ಲಿ ಬೀಜಬಿತ್ತಿದ್ದಾಗ ಫಸಲನ್ನು ಹೊಂದುವಿರಿ. ನಿಮಗೆ ಬಹುದೊಡ್ಡ ಸುಗ್ಗಿ ಆಗುವದು. ಹೊಲದಲ್ಲಿ ನಿಮ್ಮ ಪಶುಗಳಿಗೆ ಬೇಕಾದಷ್ಟು ಹುಲ್ಲು ಇರುವದು. ಮೇಯಲು ನಿಮ್ಮ ಕುರಿಗಳಿಗೆ ಬೇಕಾದಷ್ಟು ಬಯಲಿವೆ.


ಇದು ಸತ್ಯ: ಸ್ವಲ್ಪ ಸಮಯದ ನಂತರ, ಕರ್ಮೆಲ್ ಬೆಟ್ಟದಂತೆ ಲೆಬನೋನ್ ಫಲವತ್ತಾಗುವದು. ಕರ್ಮೆಲ್ ಬೆಟ್ಟವು ದಟ್ಟ ಅಡವಿಯಾಗುವದು.


ಲೆಬನೋನಿನ ದೇವದಾರು ವೃಕ್ಷಗಳು ಯೆಹೋವನವೇ, ಅವುಗಳನ್ನು ನೆಟ್ಟಾತನು ಯೆಹೋವನೇ. ಆತನೇ ಅವುಗಳಿಗೆ ಬೇಕಾದ ನೀರನ್ನು ಒದಗಿಸುವನು.


ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು.


ಆಗ, ನೀನು ಮೊದಲು ಹೊಂದಿದ್ದೆಲ್ಲ ಅಲ್ಪವಾಗಿ ತೋರುವುದು; ನಿನ್ನ ಭವಿಷ್ಯವು ಬಹು ಯಶಸ್ವಿಯಾಗುವುದು.


ನೀನು ಅನೇಕ ಮಕ್ಕಳನ್ನು ಪಡೆದುಕೊಳ್ಳುವೆ. ಅವರು ಭೂಮಿಯ ಮೇಲಿರುವ ಹುಲ್ಲಿನ ಗರಿಗಳಷ್ಟಿರುವರು.


ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು