Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:6 - ಪರಿಶುದ್ದ ಬೈಬಲ್‌

6 ಆದ್ದರಿಂದ ಗರ್ವವು ಅವರಿಗೆ ಆಭರಣವಾಗಿದೆ; ದ್ವೇಷವು ಅವರಿಗೆ ಉಡುಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ಕಾರಣ ಗರ್ವವೇ ಅವರಿಗೆ ಕಂಠಮಾಲೆ I ಹಿಂಸಾಚಾರವೇ ಅವರಿಗೆ ಬಟ್ಟೆಬರೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಗರ್ವವು ಕಂಠಮಾಲೆಯಂತೆ ಅವರನ್ನು ಸುತ್ತಿದೆ. ದಬ್ಬಾಳಿಕೆ ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:6
25 ತಿಳಿವುಗಳ ಹೋಲಿಕೆ  

ಅವನು ಉಡುಪುಗಳನ್ನು ಧರಿಸುವಂತೆ ಶಪಿಸುವುದೇ ಅವನ ದಿನನಿತ್ಯ ಜೀವಿತದ ಕೆಲಸವಾಗಿತ್ತು.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ನಿನ್ನ ತಂದೆತಾಯಿಗಳ ಮಾತುಗಳು ನಿನ್ನ ತಲೆಗೆ ಸುಂದರವಾದ ಹೂವಿನ ಕಿರೀಟದಂತೆಯೂ ನಿನ್ನ ಕೊರಳಿಗೆ ಸುಂದರವಾದ ಹಾರದಂತೆಯೂ ಇವೆ.


ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.


ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.


ಅನಂತರ ನಿನಗೆ ಕೆಲವು ಆಭರಣಗಳನ್ನು ಕೊಟ್ಟೆನು. ನಿನ್ನ ತೋಳುಗಳಿಗೆ ತೋಳುಕಟ್ಟುಗಳನ್ನು, ಕುತ್ತಿಗೆಗೆ ಹಾರವನ್ನು ತೊಡಿಸಿದೆನು.


“ಮೋವಾಬಿನ ಸೊಕ್ಕಿನ ಬಗ್ಗೆ ನಾವು ಕೇಳಿದ್ದೇವೆ. ಅವನಿಗೆ ತುಂಬ ಸೊಕ್ಕು ಬಂದಿತ್ತು. ತಾನೇ ಮುಖ್ಯವಾದವನೆಂದು ಅವನು ಭಾವಿಸಿದ್ದನು. ಅವನು ಯಾವಾಗಲೂ ಬಡಾಯಿಕೊಚ್ಚಿಕೊಳ್ಳುತ್ತಿದ್ದನು. ಅವನು ತುಂಬಾ ಸೊಕ್ಕಿನವನಾಗಿದ್ದನು.”


“ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.”


ಕಿವಿಯೋಲೆಗಳನ್ನು, ಕೈಬಳೆಗಳನ್ನು, ಸೆರಗುವಸ್ತ್ರಗಳನ್ನು,


ನನ್ನ ಪ್ರಿಯಳೇ, ನನ್ನ ವಧುವೇ, ನೀನು ನನ್ನ ಹೃದಯವನ್ನು ಅಪಹರಿಸಿರುವೆ. ನಿನ್ನ ನೋಟದಿಂದಲೂ ನಿನ್ನ ಮುತ್ತಿನಹಾರದಿಂದಲೂ ನನ್ನ ಹೃದಯವನ್ನು ವಶಪಡಿಸಿಕೊಂಡಿದ್ದಿ.


ಜನರ ಅಪರಾಧಗಳಿಗೆ ದಂಡನೆಯು ಕೂಡಲೇ ಬರದಿರುವುದರಿಂದ ದುಷ್ಕೃತ್ಯಗಳನ್ನು ಮಾಡಲು ಇತರರು ಸಹ ಪ್ರೇರಿತರಾಗುತ್ತಾರೆ.


ಅವರು ಬೇರೆಯವರಿಗೆ ಕೇಡನ್ನಾಗಲಿ ನೋವನ್ನಾಗಲಿ ಮಾಡದೆ ಜೀವಿಸಲಾರರು. ಅದೇ ಅವರ ಆಹಾರ ಮತ್ತು ಪಾನೀಯ.


ಬಲಾತ್ಕಾರಿಯನ್ನು ಕಂಡು ಹೊಟ್ಟೆಕಿಚ್ಚುಪಡಬೇಡ; ಅವನ ನಡತೆಯನ್ನು ಅನುಸರಿಸಬೇಡ.


ನನ್ನ ಶತ್ರುಗಳಿಗೆ ಅವಮಾನವೇ ವಸ್ತ್ರವಾಗಲಿ! ನಾಚಿಕೆಯೇ ಅವರ ಮೇಲಂಗಿಯಾಗಲಿ.


ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು