Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:4 - ಪರಿಶುದ್ದ ಬೈಬಲ್‌

4 ಆಲಯದಲ್ಲಿ ಶತ್ರುಗಳು ಯುದ್ಧಾರ್ಭಟ ಮಾಡಿದರು. ಆಲಯದಲ್ಲಿ ತಮ್ಮ ಧ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವೈರಿಗಳಾರ್ಭಟ ನಿನ್ನ ದರ್ಶನಾಲಯದ ಮಧ್ಯೆಯಲಿ I ಅವರ ಜಯ ಬಾವುಟ ಪವಿತ್ರ ಚಿಹ್ನೆಗಳಿಗೆ ಪ್ರತಿಯಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ದರ್ಶನಾಲಯಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ವೈರಿಗಳು ನೀವು ನಮ್ಮನ್ನು ಸಂಧಿಸಿದ ಸ್ಥಳದಲ್ಲಿ ಗರ್ಜಿಸುತ್ತಾರೆ. ತಮ್ಮ ಗುರುತುಗಳನ್ನು ಆರಾಧನಾ ಚಿಹ್ನೆಗಳಾಗಿ ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:4
9 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.


“ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


“ಇಸ್ರೇಲರು ದೇವದರ್ಶನಗುಡಾರದ ಸುತ್ತಲೂ ಸ್ವಲ್ಪ ದೂರದಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನತನ್ನ ಗೋತ್ರಧ್ವಜದ ಹತ್ತಿರ ತನ್ನತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.


ಆ ಮೃಗವು ದೇವರಿಗೆ ಅಪಮಾನ ಮಾಡಲು ತನ್ನ ಬಾಯನ್ನು ತೆರೆಯಿತು. ಅಲ್ಲದೆ ದೇವರ ಹೆಸರಿನ ವಿರುದ್ಧವಾಗಿಯೂ ದೇವರು ವಾಸಿಸುವ ಸ್ಥಳದ ವಿರುದ್ಧವಾಗಿಯೂ ಪರಲೋಕದಲ್ಲಿ ಜೀವಿಸುವ ಜನರೆಲ್ಲರ ವಿರುದ್ಧವಾಗಿಯೂ ದೂಷಣೆ ಮಾಡಿತು.


“ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.


ಅದೇ ಸಮಯದಲ್ಲಿ ಅಲ್ಲಿದ್ದ ಕೆಲವರು ಯೇಸುವಿನ ಬಳಿಗೆ ಬಂದು ಗಲಿಲಾಯದಲ್ಲಿ ಯಜ್ಞ ಅರ್ಪಿಸುತ್ತಿದ್ದವರನ್ನು ಪಿಲಾತನು ಕೊಲ್ಲಿಸಿದ್ದನ್ನೂ ಅವರು ಯಜ್ಞವಾಗಿ ಅರ್ಪಿಸಿದ್ದ ಪಶುಗಳ ರಕ್ತದೊಡನೆ ಅವರ ರಕ್ತವನ್ನು ಬೆರಸಿದ್ದನ್ನೂ ಯೇಸುವಿಗೆ ತಿಳಿಸಿದರು.


ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು