Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:7 - ಪರಿಶುದ್ದ ಬೈಬಲ್‌

7 ಆ ಸೈನಿಕರು ನಿನ್ನ ಪವಿತ್ರ ಸ್ಥಳವನ್ನು ಸುಟ್ಟು ನೆಲಸಮಮಾಡಿದರು. ಆ ಆಲಯವು ನಿನ್ನ ನಾಮ ಘನತೆಗಾಗಿ ಕಟ್ಟಲ್ಪಟ್ಟಿತ್ತಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಗ್ನಿಗಾಹುತಿ ಮಾಡಿಹರು ನಿನ್ನ ನಾಮದ ಮಂದಿರವನು I ಹೊಲಸುಮಾಡಿ, ನೆಲಸಮಮಾಡಿಹರಿದೊ ನಿನ್ನ ದೇಗುಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿಹಾಕಿ ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ ನೆಲಸಮಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಪರಿಶುದ್ಧ ಸ್ಥಳಕ್ಕೆ ಬೆಂಕಿಹಚ್ಚಿದ್ದಾರೆ. ನಿಮ್ಮ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಅಪವಿತ್ರಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:7
14 ತಿಳಿವುಗಳ ಹೋಲಿಕೆ  

ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ.


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.


ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.


ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು.


“ಯೆಹೋವನು ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಿದನು. ನನ್ನ ತಂದೆಯಾದ ದಾವೀದನ ಸ್ಥಾನದಲ್ಲಿ ನಾನೀಗ ರಾಜನಾಗಿದ್ದೇನೆ. ಯೆಹೋವನ ವಾಗ್ದಾನದಂತೆ ಈಗ ನಾನು ಇಸ್ರೇಲಿನ ಜನರನ್ನು ಆಳುತ್ತಿದ್ದೇನೆ. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಆಲಯವನ್ನು ನಿರ್ಮಿಸಿದೆನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆ. ನಿಮ್ಮ ಪವಿತ್ರಸ್ಥಳಗಳನ್ನು ಬರಿದುಮಾಡುವೆ. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ.


ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;


ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.


ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.


ಇಸ್ರೇಲ್ ಜನರ ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅತೀ ದುಷ್ಟ ಜನಾಂಗಗಳನ್ನು ಬರಮಾಡುವೆನು. ನಾನು ಗರ್ವಿಷ್ಠರ ಸೊಕ್ಕನ್ನು ಮುರಿಯುವೆನು; ಅವರ ಆರಾಧನೆಯ ಸ್ಥಳಗಳು ಅಪರಿಶುದ್ಧಗೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು