Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:7 - ಪರಿಶುದ್ದ ಬೈಬಲ್‌

7 ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:7
19 ತಿಳಿವುಗಳ ಹೋಲಿಕೆ  

ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ ದೀನರನ್ನು ಉನ್ನತಿಗೇರಿಸುತ್ತಾನೆ.


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ. ದುಷ್ಟರನ್ನಾದರೋ ನಾಚಿಕೆಗೆ ಗುರಿಪಡಿಸುವನು.


ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಆಗ ದಾವೀದನು ಮೀಕಲಳಿಗೆ, “ಯೆಹೋವನು ನಿನ್ನ ತಂದೆಯನ್ನಾಗಲಿ ಅವರ ಕುಟುಂಬದ ಇತರ ಯಾರನ್ನೇ ಆಗಲಿ ಆರಿಸಿಕೊಳ್ಳದೆ ನನ್ನನ್ನೇ ಇಸ್ರೇಲರ ನಾಯಕನನ್ನಾಗಿ ಆರಿಸಿಕೊಂಡಿದ್ದಾನೆ. ಆದ್ದರಿಂದಲೇ ನಾನು ಯೆಹೋವನ ಸನ್ನಿಧಿಯಲ್ಲಿ ಕುಣಿದಾಡಿದೆನು.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.


ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.


ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.


ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.


ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ?


“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು