Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:12 - ಪರಿಶುದ್ದ ಬೈಬಲ್‌

12 ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಭೂಪತಿಗಳಿಗೆ ಭಯಪ್ರದನಾಗಿ ಪ್ರಭುಗಳ ಅಹಂಭಾವವನ್ನು ತೊಡೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ಅಧಿಕಾರಿಗಳ ಗರ್ವವನ್ನು ಮುರಿಯುತ್ತಾರೆ. ಭೂಲೋಕದ ಅರಸರು ದೇವರಿಗೆ ಭಯಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:12
15 ತಿಳಿವುಗಳ ಹೋಲಿಕೆ  

ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ.


“ಬಲಿಷ್ಠ ರಾಜರುಗಳ ಸೈನ್ಯಗಳು ಓಡಿಹೋಗುತ್ತಿವೆ! ಸೈನಿಕರು ಯುದ್ಧದಿಂದ ತಂದ ಕೊಳ್ಳೆವಸ್ತುಗಳನ್ನು ಮನೆಯಲ್ಲಿದ್ದ ಸ್ತ್ರೀಯರು ಹಂಚಿಕೊಳ್ಳುವರು.


ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು.


ಆ ಸಮಯದಲ್ಲಿ ಯೆಹೋವನು ಪರಲೋಕ ಸೈನ್ಯಕ್ಕೆ ಪರಲೋಕದಲ್ಲಿ ನ್ಯಾಯತೀರಿಸುವನು. ಭೂಮಿಯ ಅರಸರನ್ನು ಭೂಮಿಯ ಮೇಲೆ ನ್ಯಾಯವಿಚಾರಣೆಮಾಡುವನು.


ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.


ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ. ಅಧಿಪತಿಗಳೇ, ಬುದ್ದಿಮಾತುಗಳಿಗೆ ಕಿವಿಗೊಡಿರಿ.


“ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು.


ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು.


ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. ದೇವರಿಗೆ ಸ್ತೋತ್ರ!


ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.


ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು