Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:8 - ಪರಿಶುದ್ದ ಬೈಬಲ್‌

8 ದೇವರ ಕೃಪಾವಾತ್ಸಲ್ಯವು ಎಂದೆಂದಿಗೂ ನಿಂತುಹೋಯಿತೇ? ಆತನು ನಮ್ಮೊಂದಿಗೆ ಮತ್ತೆಂದೂ ಮಾತಾಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆತನಚಲ ಪ್ರೀತಿ ಇನ್ನು ಮಾಯವಾಯಿತೋ? I ಆತನ ವಾಗ್ದಾನ ತಲತಲಾಂತರಕು ಮುಗಿಯಿತೋ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರ ಒಡಂಬಡಿಕೆಯ ಪ್ರೀತಿಯು ಸದಾಕಾಲಕ್ಕೆ ನಿಂತು ಹೋಯಿತೋ? ತಲತಲಾಂತರಕ್ಕೂ ವಾಗ್ದಾನ ಮುಗಿದು ಹೋಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:8
11 ತಿಳಿವುಗಳ ಹೋಲಿಕೆ  

ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ.


ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ.


ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’


ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ಈ ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ.


ನಾನು ದುಃಖಕ್ರಾಂತನಾಗಿ ಇನ್ನೆಷ್ಟುಕಾಲ ಆಲೋಚಿಸುತ್ತಿರಬೇಕು? ನನ್ನ ವೈರಿಗಳು ಇನ್ನೆಷ್ಟುಕಾಲ ನನ್ನ ಮೇಲೆ ಜಯಗಳಿಸಬೇಕು?


ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?


ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು