Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:54 - ಪರಿಶುದ್ದ ಬೈಬಲ್‌

54 ಆತನು ತನ್ನ ಜನರನ್ನು ತನ್ನ ಪವಿತ್ರನಾಡಿಗೂ ತನ್ನ ಭುಜಬಲದಿಂದ ತೆಗೆದುಕೊಂಡ ಪರ್ವತಕ್ಕೂ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಕರೆತಂದನವರನು ತನ್ನ ಪವಿತ್ರನಾಡಿಗೆ I ಭುಜಬಲದಿಂದ ಗಳಿಸಿದಾಪರ್ವತ ಸೀಮೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಹೀಗೆ ದೇವರು ತಮ್ಮ ಭುಜಬಲದಿಂದ ಪವಿತ್ರ ನಾಡಿನ ತಮ್ಮ ಮೇರೆಗೂ, ಈ ಪರ್ವತ ನಾಡಿಗೂ ಅವರನ್ನು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:54
9 ತಿಳಿವುಗಳ ಹೋಲಿಕೆ  

ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು.


ದೇವರು ತನ್ನ ಜನರಿಗೆ ವಾಗ್ದಾನ ಮಾಡಿದವುಗಳನ್ನು ನಾವು ಹೊಂದಿಕೊಳ್ಳುತ್ತೇವೆ ಎಂಬುದಕ್ಕೆ ಆ ಪವಿತ್ರಾತ್ಮನೇ ಪ್ರಮಾಣವಾಗಿದ್ದಾನೆ. ದೇವರು ಸಂಪಾದಿಸಿಕೊಂಡ ಜನರಿಗೆ ಇದು ಸಂಪೂರ್ಣ ವಿಮೋಚನೆಯನ್ನು ಉಂಟುಮಾಡುತ್ತದೆ. ದೇವರ ಮಹಿಮೆಗೆ ಸ್ತೋತ್ರವಾಗ ಬೇಕೆಂಬುದೇ ಇದೆಲ್ಲದರ ಉದ್ದೇಶವಾಗಿದೆ.


ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.


ಬಾಷಾನ್ ಪರ್ವತವೇ, ಚೀಯೋನ್ ಪರ್ವತವನ್ನು ನೀನು ಕೀಳಾಗಿ ಕಾಣುವುದೇಕೆ? ಯೆಹೋವನು ತನಗೆ ಪ್ರಿಯವಾದ ಚೀಯೋನ್ ಪರ್ವತವನ್ನೇ ತನ್ನ ಶಾಶ್ವತ ವಾಸಸ್ಥಾನವಾಗಿ ಆರಿಸಿಕೊಂಡಿದ್ದಾನೆ.


ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು ಪ್ರೀತಿಯಿಂದ ನಡೆಸುವೆ. ನಿನ್ನ ಬಲದಿಂದ ನೀನು ಈ ಜನರನ್ನು ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.


ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು