Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:1 - ಪರಿಶುದ್ದ ಬೈಬಲ್‌

1 ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಮ್ಲೇಚ್ಫರು ನಿನ್ನ ಸ್ವಾಸ್ತ್ಯವನ್ನು ಹೊಕ್ಕು ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳಾಗಿ ಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:1
25 ತಿಳಿವುಗಳ ಹೋಲಿಕೆ  

ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;


ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.


ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’


ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.


ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಲ್ಲಿದ್ದ ಭಂಡಾರವನ್ನೆಲ್ಲಾ ಮತ್ತು ರಾಜನ ಅರಮನೆಯಲ್ಲಿದ್ದ ಭಂಡಾರವನ್ನೆಲ್ಲಾ ತೆಗೆದುಕೊಂಡು ಹೋದನು. ಇಸ್ರೇಲರ ರಾಜನಾದ ಸೊಲೊಮೋನನು ದೇವಾಲಯದಲ್ಲಿಟ್ಟಿದ್ದ ಬಂಗಾರವನ್ನೆಲ್ಲಾ ನೆಬೂಕದ್ನೆಚ್ಚರನು ತೆಗೆದುಕೊಂಡನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು.


ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು.


ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ದೇವರು ಅವರಿಗೆ ಹೇಳಿದ್ದೇನೆಂದರೆ, “ಈ ಆಲಯವನ್ನು ಹೊಲೆ ಮಾಡಿರಿ. ಆಲಯದ ಅಂಗಳವನ್ನು ಹೆಣಗಳಿಂದ ತುಂಬಿಸಿರಿ. ಈಗ ಹೊರಡಿ.” ಅವರು ಹೊರಟುಹೋಗಿ ನಗರದ ಜನರನ್ನು ಕೊಂದರು.


ಬಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಬೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನ್ನು ಕೆಡವಿದರು.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.


ನಿನ್ನ ಪವಿತ್ರ ಜನರು ತಮ್ಮ ದೇಶದಲ್ಲಿ ಸ್ವಲ್ಪಕಾಲಕ್ಕೆ ಮಾತ್ರ ವಾಸಿಸಿದರು. ಆಗ ನಮ್ಮ ಶತ್ರುಗಳು ಬಂದು ನಿನ್ನ ಪವಿತ್ರ ಆಲಯದಲ್ಲಿ ತುಳಿದಾಡಿದರು.


“ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು