Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:3 - ಪರಿಶುದ್ದ ಬೈಬಲ್‌

3 ರಕ್ತವು ನೀರಿನಂತೆ ಹರಿಯುವ ತನಕ ಶತ್ರುಗಳು ನಿನ್ನ ಜನರನ್ನು ಕೊಂದುಹಾಕಿದರು. ಶವಗಳನ್ನು ಹೂಳಲು ಯಾರೂ ಉಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀರಂತೆ ಚೆಲ್ಲಿ ಹರಾ ನೆತ್ತರನು ಜೆರುಸಲೇಮ್ ಸುತ್ತಲು I ನಮ್ಮವರ ಶವಗಳನು ಹೂಳಲು ಯಾರೂ ಇಲ್ಲದಿರಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆರೂಸಲೇವಿುನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ. ಅವರನ್ನು ಹೂಳಿಡುವವನೊಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:3
15 ತಿಳಿವುಗಳ ಹೋಲಿಕೆ  

“ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”


ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.


ಸಕಲ ಪ್ರಜೆ, ಕುಲ, ಭಾಷೆ, ಜನಾಂಗದವರು ಮೂರುವರೆ ದಿನಗಳ ಕಾಲ ಈ ಸಾಕ್ಷಿಗಳ ಶವಗಳನ್ನು ನೋಡುತ್ತಾ ಇರುತ್ತಾರೆ. ಅವರನ್ನು ಸಮಾಧಿ ಮಾಡಲು ಜನರು ಒಪ್ಪುವುದಿಲ್ಲ.


ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವನ್ನು ಸುರಿಸಿ ಅಪರಾಧಿಯಾದಳು.”


ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ನಿನಗೋಸ್ಕರವಾಗಿ ನಾವು ಎಲ್ಲಾ ಸಮಯಗಳಲ್ಲಿ ಸಾವಿನ ದವಡೆಯಲ್ಲಿದ್ದೇವೆ. ಕೊಯ್ಯಲು ಕೊಂಡೊಯ್ಯುವ ಕುರಿಗಳಿಗಿಂತ ಕಡೆಗಣಿಸಲ್ಪಟ್ಟಿದ್ದೇವೆ.”


“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.


ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.


ಆ ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಬಿದ್ದಿರುವವು. ಆ ಸತ್ತಜನರಿಗಾಗಿ ಯಾರೂ ಅಳುವದಿಲ್ಲ. ಯಾರೂ ಅವರ ಶವಗಳನ್ನು ಒಟ್ಟುಗೂಡಿಸಿ ಹೂಳುವದಿಲ್ಲ. ಅವುಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವವು.


ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ ಇದು ಯೆಹೋವನ ನುಡಿ. ‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ.


ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.


ಅನ್ಯ ಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು.


ಯೆಹೋವನು ಹೇಳುವುದೇನೆಂದರೆ, “ಜನರ ಜೀವನವನ್ನು ನಾನು ಬಹು ಕಷ್ಟಕರವಾಗಿ ಮಾಡುವೆನು. ಅವರು ಕುರುಡರಂತೆ ಅತ್ತಿತ್ತ ತೊಳಲಾಡುವರು. ತಾವು ಎಲ್ಲಿಗೆ ಹೋಗುತ್ತಿದ್ದಾರೆಂದು ಅವರಿಗೆ ತಿಳಿಯದು. ಯಾಕೆಂದರೆ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದಾರೆ. ಅನೇಕ ಮಂದಿ ಕೊಲ್ಲಲ್ಪಡುವರು. ಅವರ ರಕ್ತವು ಭೂಮಿಗೆ ಸುರಿಯಲ್ಪಡುವುದು. ಅವರ ಹೆಣಗಳು ಮಲದ ಹಾಗೆ ನೆಲದಲ್ಲಿ ಬೀಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು