Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:8 - ಪರಿಶುದ್ದ ಬೈಬಲ್‌

8 ನಮ್ಮ ಪೂರ್ವಿಕರು ಮಾಡಿದ ಪಾಪಕ್ಕೆ ಬರಬೇಕಾದ ದಂಡನೆಯನ್ನು ನಮ್ಮ ಮೇಲೆ ಬರಗೊಡಿಸಬೇಡ. ಬೇಗನೆ ನಿನ್ನ ಕರುಣೆಯನ್ನು ನಮಗೆ ತೋರು! ನೀನು ನಮಗೆ ಎಷ್ಟೋ ಅಗತ್ಯವಾಗಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ I ಉರಿಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹುವಾಗಿ ಕುಗ್ಗಿಹೋಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪೂರ್ವಿಕರ ಪಾಪಗಳನ್ನು ನಮಗೆ ವಿರೋಧವಾಗಿ ಜ್ಞಾಪಕ ಮಾಡಿಕೊಳ್ಳಬೇಡಿರಿ. ನಿಮ್ಮ ಕರುಣೆಯು ಬೇಗ ನಮ್ಮನ್ನು ಎದುರುಗೊಳ್ಳಲಿ. ನಾವು ಬಹಳವಾಗಿ ಕುಗ್ಗಿಹೋಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:8
18 ತಿಳಿವುಗಳ ಹೋಲಿಕೆ  

ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ.


ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.


ಯೆಹೋವನು ಅಸಹಾಯಕರನ್ನು ಕಾಪಾಡುವನು. ನಾನು ಅಸಹಾಯಕನಾಗಿದ್ದಾಗ ಯೆಹೋವನು ನನ್ನನ್ನು ರಕ್ಷಿಸಿದನು.


ನೀನು ರಾಜನನ್ನು ಬಹಳವಾಗಿ ಆಶೀರ್ವದಿಸಿರುವೆ. ಅವನ ತಲೆಗೆ ಬಂಗಾರದ ಕಿರೀಟವನ್ನು ತೊಡಿಸಿರುವೆ.


ಆ ನಗರಿಯ ಪಾಪಗಳು ಪರಲೋಕವನ್ನು ಮುಟ್ಟುವಂತೆ ಬೆಳೆದುನಿಂತಿವೆ. ಅವಳು ಮಾಡಿದ ಕೆಟ್ಟಕಾರ್ಯಗಳನ್ನು ದೇವರು ಮರೆತಿಲ್ಲ.


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.


ಆತನು ನನ್ನೊಂದಿಗೆ, “ನರಪುತ್ರನೇ, ಇಸ್ರೇಲ್ ಜನಾಂಗದವರೊಡನೆ ಮಾತನಾಡಲು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಎಷ್ಟೋಬಾರಿ ನನಗೆ ವಿರುದ್ಧವಾಗಿ ಎದ್ದರು. ಅವರ ಪೂರ್ವಿಕರೂ ನನಗೆ ವಿರುದ್ಧವಾಗಿ ಎದ್ದಿದ್ದರು. ನನಗೆ ವಿರುದ್ಧವಾಗಿ ಎಷ್ಟೋವೇಳೆ ಪಾಪ ಮಾಡಿದರು. ಈಗಲೂ ಅವರು ಪಾಪ ಮಾಡುತ್ತಲೇ ಇದ್ದಾರೆ.


ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.


ಆತನು ತನ್ನ ಜನರನ್ನು ಅನೇಕ ಸಲ ರಕ್ಷಿಸಿದರೂ ಅವರು ಆತನಿಗೆ ವಿರೋಧವಾಗಿ ತಿರುಗಿ ತಮ್ಮ ಇಷ್ಟಾನುಸಾರವಾಗಿ ಮಾಡಿದರು. ಅವರು ಅನೇಕಾನೇಕ ಕೆಟ್ಟಕಾರ್ಯಗಳನ್ನು ಮಾಡಿದರು.


ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯರು ಬಲಿಷ್ಠರಾಗುವರು. ನೀವಾದರೋ ಬಲಹೀನರಾಗುವಿರಿ.


ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.


ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು