Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:13 - ಪರಿಶುದ್ದ ಬೈಬಲ್‌

13 ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾಶಮಾಡುವುವು ಅದನು ಕಾಡುಹಂದಿಗಳು I ತಿಂದುಹಾಕುವುವು ಅದನು ಅರಣ್ಯಮೃಗಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಡವಿಯಿಂದ ಬಂದ ಹಂದಿಗಳು ಅದನ್ನು ಹಾಳು ಮಾಡುತ್ತವೆ; ಕಾಡಿನ ಮೃಗಗಳು ಅದನ್ನು ತಿಂದು ಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:13
15 ತಿಳಿವುಗಳ ಹೋಲಿಕೆ  

ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ಆ ದಿನ ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿ ನುಗ್ಗಿತ್ತು. ಜೆರುಸಲೇಮಿನ ಸೈನಿಕರು ಓಡಿಹೋದರು. ಅವರು ರಾತ್ರಿಯ ಸಮಯದಲ್ಲಿ ಎರಡು ಗೋಡೆಗಳ ಮಧ್ಯದ ಬಾಗಿಲಿನಿಂದ ನಗರದಿಂದ ಓಡಿಹೋದರು. ಆ ಬಾಗಿಲು ರಾಜನ ಉದ್ಯಾನವನದ ಹತ್ತಿರ ಇತ್ತು. ಬಾಬಿಲೋನಿನ ಸೈನಿಕರು ಜೆರುಸಲೇಮ್ ನಗರವನ್ನು ಮುತ್ತಿದ್ದರೂ ಜೆರುಸಲೇಮಿನ ಸೈನಿಕರು, ಮರುಭೂಮಿಯ ಕಡೆಗೆ ಓಡಿಹೋದರು.


“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.


ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.


ಅವನ ಶತ್ರುಗಳಿಗೆಲ್ಲಾ ನೀನು ಸಂತೋಷವನ್ನುಂಟು ಮಾಡಿರುವೆ. ಅವನ ಶತ್ರುಗಳಿಗೆ ಯುದ್ಧದಲ್ಲಿ ಜಯವಾಗುವಂತೆ ಮಾಡಿರುವೆ.


“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


ಆದರೆ ದ್ರಾಕ್ಷಾಲತೆಯು ಬೇರು ಸಮೇತ ಕಿತ್ತುಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಬಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು.


ಆ ಸೈನಿಕರ ಗುರಾಣಿಗಳು ಕೆಂಪಗಿವೆ. ಅವರ ಸಮವಸ್ತ್ರಗಳು ಕೆಂಪುಬಣ್ಣದಿಂದ ಹೊಳೆಯುತ್ತಿವೆ. ಅವರ ರಥಗಳು ಯುದ್ಧಕ್ಕಾಗಿ ಸಾಲುಗಟ್ಟಿ ನಿಂತಿವೆ ಮತ್ತು ಬೆಂಕಿಯ ಜ್ವಾಲೆಯಂತೆ ಹೊಳೆಯುತ್ತಿವೆ. ಅವರ ಭರ್ಜಿಗಳು ಎತ್ತಲ್ಪಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು