Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:18 - ಪರಿಶುದ್ದ ಬೈಬಲ್‌

18 ಆಗ ನಾವು ನಿನ್ನನ್ನು ಎಂದಿಗೂ ತ್ಯಜಿಸುವುದಿಲ್ಲ. ನಮ್ಮನ್ನು ಬದುಕಿಸು. ನಾವು ಬದುಕುವಂತೆ ಮಾಡು, ಆಗ ನಾವು ನಿನ್ನನ್ನು ಆರಾಧಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಬಿಟ್ಟಗಲುವುದಿಲ್ಲ ನಾವೆಂದೆಂದಿಗು ನಿನ್ನನು I ಪುನರ್ಜೀವಗೊಳಿಸು, ಮಾಳ್ಪೆವು ನಿನ್ನ ನಾಮಸ್ಮರಣೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ನಾವು ನಿನ್ನಿಂದ ಅಗಲುವದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ನಾವು ನಿಮ್ಮಿಂದ ತೊಲಗುವುದಿಲ್ಲ. ನಮ್ಮನ್ನು ಉಜ್ಜೀವಿಸಿರಿ, ಆಗ ನಿಮ್ಮ ಹೆಸರನ್ನು ಕರೆಯುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:18
16 ತಿಳಿವುಗಳ ಹೋಲಿಕೆ  

ವ್ಯಾಜ್ಯದಲ್ಲಿ ನನ್ನ ಪರವಾಗಿ ಹೋರಾಡಿ ನನ್ನನ್ನು ರಕ್ಷಿಸು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ಯೆಹೋವನೇ, ನಾನು ಬಹುಕಾಲ ಸಂಕಟಪಟ್ಟಿದ್ದೇನೆ; ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು.


ನನಗೆ ಸಾವು ಸಮೀಪಿಸಿದೆ. ಯೆಹೋವನೇ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು.


ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು. ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯಮಾಡು.


ನಾವು ನಿನ್ನ ಜನರೂ ನೀನು ಪಾಲಿಸುವ ಮಂದೆಯೂ ಆಗಿದ್ದೇವೆ. ನಾವು ನಿನ್ನನ್ನು ಎಂದೆಂದಿಗೂ ಕೊಂಡಾಡುವೆವು. ನಿನ್ನನ್ನು ಸದಾಕಾಲ ಸ್ತುತಿಸುವೆವು.


ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು.


ನನ್ನನ್ನು ಅನೇಕ ಕಷ್ಟಹಿಂಸೆಗಳಿಗೆ ಗುರಿಮಾಡಿದಾತನು ನೀನೇ. ಆದರೆ ಅವೆಲ್ಲವುಗಳಿಂದ ನೀನು ನನ್ನನ್ನು ರಕ್ಷಿಸಿ ಜೀವಂತವಾಗಿ ಉಳಿಸಿದೆ. ಆಪತ್ತುಗಳಿಂದ ನಾನೆಷ್ಟೇ ಮುಳುಗಿಹೋಗಿದ್ದರೂ ಮೇಲೆತ್ತಿದಾತನು ನೀನೇ.


ಯೆಹೋವನೇ, ನೀನು ಎಷ್ಟೋ ಕರುಣೆಯುಳ್ಳವನು. ನಿನ್ನ ಚಿತ್ತಾನುಸಾರವಾಗಿ ನನ್ನನ್ನು ಉಜ್ಜೀವನಗೊಳಿಸು.


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು