Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 82:2 - ಪರಿಶುದ್ದ ಬೈಬಲ್‌

2 ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಅನ್ಯಾಯವಾಗಿ ತೀರ್ಪುಕೊಡುವದೂ ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವದೂ ಇನ್ನೆಷ್ಟರವರೆಗೆ? ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ. ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 82:2
16 ತಿಳಿವುಗಳ ಹೋಲಿಕೆ  

ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’


ಅಪರಾಧಿಗೆ ಪಕ್ಷಪಾತ ಮಾಡುವುದು ಸರಿಯಲ್ಲ; ನಿರಪರಾಧಿಗೆ ಅನ್ಯಾಯ ಮಾಡುವುದು ಸರಿಯಲ್ಲ.


ನಾನು ಬೋಧಿಸುವ ಸುವಾರ್ತೆಗೆ ಅವರೇನೂ ಸೇರಿಸಲಿಲ್ಲ. (ಅವರು ಪ್ರಮುಖರಾಗಿದ್ದರೊ ಪ್ರಮುಖರಾಗಿರಲಿಲ್ಲವೊ ಅದು ನನಗೆ ಮುಖ್ಯವಲ್ಲ. ದೇವರಿಗೆ ಎಲ್ಲಾ ಜನರು ಒಂದೇ ಆಗಿದ್ದಾರೆ.)


ಇನ್ನೆಷ್ಟರವರೆಗೆ ನೀವು ನನ್ನ ಮೇಲೆ ಆಕ್ರಮಣ ಮಾಡುವಿರಿ? ನಾನು ಬಾಗಿದ ಗೋಡೆಯಂತೆಯೂ ಬೀಳಲಿರುವ ಪ್ರಾಕಾರದಂತೆಯೂ ಇದ್ದೇನೆ.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.


ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ.


“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.


ಈ ವಾದದಲ್ಲಿ ನಾನು ಮುಖದಾಕ್ಷಿಣ್ಯ ಮಾಡುವುದಿಲ್ಲ; ಯಾರ ಮುಖಸ್ತುತಿಯನ್ನೂ ಮಾಡುವುದಿಲ್ಲ.


ಇದು ನನ್ನ ಒಡೆಯನಾದ ಯೆಹೋವನ ನುಡಿಗಳು: “ಇಸ್ರೇಲ್ ಜನರನ್ನು ಆಳುವವರೇ, ಅವರನ್ನು ಕಠಿಣವಾಗಿ ಆಳುವದನ್ನು ನಿಲ್ಲಿಸಿರಿ. ಅವರನ್ನು ಸುಲುಕೊಳ್ಳುವದನ್ನು ನಿಲ್ಲಿಸಿರಿ. ನ್ಯಾಯದಿಂದಿದ್ದು ಒಳ್ಳೆಯದನ್ನೆ ಮಾಡಿರಿ. ಅವರನ್ನು ಅವರ ಮನೆಗಳಿಂದ ಹೊರಡಿಸುವದನ್ನು ನಿಲ್ಲಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು